Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?: ಜೈರಾಮ್ ರಮೇಶ್ ಪ್ರಶ್ನೆ

ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?: ಜೈರಾಮ್ ರಮೇಶ್ ಪ್ರಶ್ನೆ

- Advertisement -
- Advertisement -

ಕಳೆದ ಒಂದು ತಿಂಗಳಿನಿಂದ ಮಣಿಪುರ ರಾಜ್ಯ ಅಕ್ಷರಶಃ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿರುವುದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ”ಮಣಿಪುರವು ಕಳೆದ ಏಳು ವಾರಗಳಿಂದ ತೀವ್ರ ಮತ್ತು ಅಗಾಧ ವಿಪತ್ತನ್ನು ಅನುಭವಿಸುತ್ತಿದೆ. ಅಲ್ಲಿ ಯಾವುದೇ ಸುಧಾರಣೆಯ ಲಕ್ಷಣಗಳು ಕಾಣಿಸುತ್ತಿಲ್ಲ. ದುರಂತ ಸಂಭವಿಸಿದ ಒಂದು ತಿಂಗಳ ನಂತರ ಗೃಹ ಸಚಿವರ ಸಂತ್ರಸ್ತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಗೃಹ ಸಚಿವರು ಒಂದು ತಿಂಗಳ ನಂತರ ವಿಳಂಬವಾದರೂ ಭೇಟಿ ನೀಡಿದ್ದಾರೆ. ಅವರ ಸಣ್ಣ ಕರುಣೆಗೆ ರಾಷ್ಟ್ರವು ಕೃತಜ್ಞರಾಗಿರಬೇಕು.”

”ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಇನ್ನೂ ಮೌನವಾಗಿರುವುದೇಕೆ? ಅವರು ಏಕೆ ರಾಜ್ಯಕ್ಕೆ ಭೇಟಿ ನೀಡಿಲ್ಲ ಮತ್ತು ಸಮುದಾಯಗಳ ನಡುವೆ ಸೌಹಾರ್ದತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಏಕೆ ಮನವಿ ಮಾಡುತ್ತಿಲ್ಲ? ಮಣಿಪುರಕ್ಕೆ ಸರ್ವಪಕ್ಷ ನಿಯೋಗ ತೆರಳಲು ಅವರು ಏಕೆ ಪ್ರೋತ್ಸಾಹಿಸಬಾರದು?” ಎಂದು ಕೇಳಿದ್ದಾರೆ.

ಬಿಜೆಪಿ ನೇತೃತ್ವದ ಆಡಳಿತಾರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ವಾಗ್ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ.

ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದ 15 ದಿನಗಳ ನಂತರ ಮತ್ತು ಇನ್ನೂ ಐದು ದಿನಗಳವರೆಗೆ ಇಂಟರ್ನೆಟ್ ಅನ್ನು ಮತ್ತೆ ಸ್ಥಗಿತಗೊಳಿಸಿದ ನಂತರ, ರಾಜ್ಯದಲ್ಲಿ ಶಾಂತಿಗಾಗಿ ಕರೆ ನೀಡುವ ಯಾವುದೇ ಸಂದೇಶವನ್ನು ನೀಡಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಈ ಹಿಂದೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಪಾದಿಸಿದರು.

ಈ ಮಧ್ಯೆ ಗೃಹ ವ್ಯವಹಾರಗಳ ಸಚಿವಾಲಯವು ಘಟನೆಗಳ ತನಿಖೆಗಾಗಿ ತನಿಖಾ ಆಯೋಗವನ್ನು ನೇಮಿಸಿದೆ. ಬಿಕ್ಕಟ್ಟಿನ ಹಿಂದಿನ ಕಾರಣಗಳು ಮತ್ತು ಅಂಶಗಳನ್ನು ಪರಿಶೀಲಿಸಲು ಮಣಿಪುರ ಸರ್ಕಾರವು 1952ರ ವಿಚಾರಣಾ ಆಯೋಗಗಳ ಅಡಿಯಲ್ಲಿ ನ್ಯಾಯಾಂಗ ವಿಚಾರಣಾ ಆಯೋಗವನ್ನು ಸ್ಥಾಪಿಸಲು ಶಿಫಾರಸು ಮಾಡಿತ್ತು.

ವಿಶೇಷ ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳನ್ನು ಕೂಲಂಕಷವಾಗಿ ಪರಿಶೀಲಿಸು ಮುಂದಾಗಿದೆ. ಈ ಹಿಂಸಾಚಾರಕ್ಕೆ ಮೂಲ ಕಾರಣವಾದದ್ದು ಏನು ಎಂಬ ಬಗ್ಗೆ ಬೆಳಕು ಚೆಲ್ಲುತ್ತಿದೆ. ಈ ಆಯೋಗದಲ್ಲಿ ನ್ಯಾಯಮೂರ್ತಿ ಅಜಯ್ ಲಂಬಾ, ಗೌಹಾಟಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ, ಹಿಮಾಂಶು ಶೇಖರ್ ದಾಸ್ (ಐಎಎಸ್ ನಿವೃತ್ತ), ಮತ್ತು ಅಲೋಕ ಪ್ರಭಾಕರ್ (ಐಪಿಎಸ್ ನಿವೃತ್ತ) ಇದ್ದಾರೆ.

ಈ ಆಯೋಗವು ತನ್ನ ಮೊದಲ ಸಭೆಯ ದಿನಾಂಕದಿಂದ ಆರು ತಿಂಗಳೊಳಗೆ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಆದಾಗ್ಯೂ, ಇದು ನಿಗದಿತ ಗಡುವಿನ ಮೊದಲು ಯಾವುದೇ ಸಂಬಂಧಿತ ವಿಷಯಗಳ ಕುರಿತು ಮಧ್ಯಂತರ ವರದಿಗಳನ್ನು ಒದಗಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...