Homeಮುಖಪುಟಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕ ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದನ್ನು ಭಾರತೀಯ ಕಮ್ಯುನಿಷ್ಟ್ ಪಕ್ಷ (ಸಿಪಿಐ) ಖಂಡಿಸಿದ್ದು, ಅಮೆರಿಕ-ಇಸ್ರೇಲ್ ಮೈತ್ರಿಯು ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಪ್ರಧಾನಿ ಮೋದಿ ಇದರ ಬಗ್ಗೆ ಏಕೆ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಕೂಡಾ ಅಮೆರಿಕದ ದಾಳಿಯನ್ನು ವಿರೋಧಿಸಿದ್ದು, ಕಷ್ಟದ ಸಮಯದಲ್ಲಿ ಭಾರತದೊಂದಿಗೆ ನಿಂತ ಇರಾನ್‌ಗೆ ಇದು ನಡೆಯುತ್ತಿರುವು ಒಳ್ಳೆಯ ಬೆಳವಣಿಗೆಯಲ್ಲ, ಆದರೆ ನಮ್ಮ ಸರ್ಕಾರವು ಇದೆಲ್ಲದರ ಬಗ್ಗೆ ಮೌನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಭಾರತದ ಮಿತ್ರ ಇರಾನ್‌

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಇರಾನ್ ಮೇಲಿನ ಅಮೆರಿಕ ದಾಳಿಯನ್ನು ಖಂಡಿಸಿರುವ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, “ನಮ್ಮ ಪಕ್ಷವು ಇರಾನ್‌ನಲ್ಲಿ ಅಮೆರಿಕ ನಡೆಸಿದ ಬಾಂಬ್ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಟ್ರಂಪ್ ಮತ್ತು ಅಮೆರಿಕ ಇಸ್ರೇಲ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿವೆ, ಅದು ಪಶ್ಚಿಮ ಏಷ್ಯಾದ ಬಿಕ್ಕಟ್ಟಿಗೆ ಮೂಲ ಕಾರಣ” ಎಂದು ಹೇಳಿದ್ದಾರೆ.

“ಅಮೆರಿಕ ಮತ್ತು ಇಸ್ರೇಲ್‌ನ ಮೈತ್ರಿಯ ಹಿಂದಿನ ರಾಜಕೀಯ ಉದ್ದೇಶವನ್ನು ಭಾರತದ ಜನರು ಅರ್ಥಮಾಡಿಕೊಳ್ಳಬೇಕು. ಅಮೆರಿಕ-ಇಸ್ರೇಲ್ ಮೈತ್ರಿಯು ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಪ್ರಧಾನಿ ಮೋದಿ ಇದರ ಬಗ್ಗೆ ಏಕೆ ಮೌನವಾಗಿದ್ದಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇರಾನ್‌ನ ಪರಮಾಣು ಸೌಲಭ್ಯಗಳ ಮೇಲಿನ ಅಮೆರಿಕದ ದಾಳಿಯ ಕುರಿತು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಕೂಡಾ ವಿರೋಧಿಸಿದ್ದು, ಜಗತ್ತು ಅಂತರರಾಷ್ಟ್ರೀಯ ಕಾನೂನುಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರಾಷ್ಟ್ರದ ಸಾರ್ವಭೌಮತ್ವವನ್ನು ಉಲ್ಲಂಘಿಸುವುದು ಗಂಭೀರ ಅಪರಾಧ ಎಂದು ಹೇಳಿದ್ದಾರೆ.

“ಅಮೆರಿಕವು ತುಂಬಾ ದೂರದಿಂದ ಬಾಂಬ್ ದಾಳಿ ನಡೆಸುತ್ತಿದ್ದು, ನಮ್ಮ ನೆರೆಯ ದೇಶದ ವಿರುದ್ಧ ಇಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ. ಇರಾನ್‌ನಂತ ಕಷ್ಟದ ಸಮಯದಲ್ಲಿ ಭಾರತದೊಂದಿಗೆ ನಿಂತವರ ಮೇಲಿನ ಈ ದಾಳಿ ಒಳ್ಳೆಯ ಬೆಳವಣಿಗೆಯಲ್ಲ ಮತ್ತು ಮತ್ತೊಂದೆಡೆ, ನಮ್ಮ ಸರ್ಕಾರವು ಈ ಎಲ್ಲದರ ಬಗ್ಗೆ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

ಲೇಖಕ ಸುಧೀಂದ್ರ ಕುಲಕರ್ಣಿ ಅವರು ಕೂಡಾ ಇರಾನ್‌ ಮೇಲಿನ ದಾಳಿಯನ್ನು ವಿರೋದಿಸಿದ್ದು, ಆಡಳಿತರೂಢ ಬಿಜೆಪಿಯ ಮೋದಿಯ ಮೌನವನ್ನು ಪ್ರಶ್ನಿಸಿದ್ದಾರೆ. “ಭಾರತವನ್ನು ಇದುವರೆಗೆ ಆಳಿದ 14 ಪ್ರಧಾನ ಮಂತ್ರಿಗಳಲ್ಲಿ, ನೆಹರೂ ಅವರಿಂದ ಹಿಡಿದು ಶಾಸ್ತ್ರಿ, ಇಂದಿರಾ ಗಾಂಧಿಯವರವರೆಗೆ…. ವಾಜಪೇಯಿ ಮತ್ತು ಡಾ. ಸಿಂಗ್ ವರಗಿನ 13 ಜನರು ಟ್ರಂಪ್ ಇರಾನ್ ಮೇಲೆ ನಡೆಸಿದ ಅಪ್ರಚೋದಿತ ದಾಳಿಯನ್ನು ಯಾವುದೇ ಹಿಂಜರಿಕೆಯಿಲ್ಲದೆ ಖಂಡಿಸುತ್ತಿದ್ದರು. 14ನೇ ಪ್ರಧಾನಿ ಹಾಗೆ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನಿಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಭಾರತದ ಮಿತ್ರ ಇರಾನ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...