Homeಮುಖಪುಟಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

- Advertisement -
- Advertisement -

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಜನರಿಗೆ ಭರವಸೆ ಆಗಬೇಕಿರುವ ವಿರೋಧ ಪಕ್ಷದ ನಾಯಕರಾದವರೊಬ್ಬರು ಕನಿಷ್ಠ ಒಂದು ಅಧಿಕೃತ ಹೇಳಿಕೆಯನ್ನೂ ನೀಡದೆ ಸಾರ್ವಜನಿಕ ರಂಗದಿಂದ ದೂರ ಉಳಿದಿರುವುದು, ‘ಮೋದಿಯವರ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ ವಹಿಸಿದ್ದಾರೆ?’ ಎಂಬ ನ್ಯಾಯಸಮ್ಮತ ಪ್ರಶ್ನೆಯನ್ನು ಸಾರ್ವಜನಿಕರೇ ನೇರವಾಗಿ ಎತ್ತುವಂತೆ ಮಾಡಿದೆ.

ದೇಶದಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದರೆ, ಇತ್ತ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಕನಿಷ್ಠ ಎಂಟು ಮಂದಿ ಬಲಿಯಾಗಿದ್ದಾರೆ. ಅಯೋಧ್ಯೆಯ ಪ್ರತಿಷ್ಠಿತ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಕಳ್ಳತನದಂತಹ ಗಂಭೀರ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳದಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ನೀಟ್ (NEET) ಪರೀಕ್ಷಾ ಅಕ್ರಮಗಳ ಸಂದರ್ಭದಲ್ಲಿ ಭಾರತದ ಪ್ರಮುಖ ಕೋಚಿಂಗ್ ಹಬ್ ಆದ ಕೋಟಾಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ಯುವಜನರ ಪ್ರತಿಭಟನೆಯಲ್ಲಿ ನೇರವಾಗಿ ಭಾಗವಹಿಸದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪರೀಕ್ಷಾ ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್, “ಯುವಜನರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದಲ್ಲಿ ವಿರೋಧ ಪಕ್ಷಗಳು ಭಾಗವಹಿಸದೇ ಹೋದರೆ ಅದು ಅವರ ‘ಸಣ್ಣತನ’ ಆಗುತ್ತದೆ. ನೀಟ್ ಅಕ್ರಮದ ವಿರುದ್ಧ ಸಿಜೆಪಿ ನೀಡಿರುವ ಕರೆಯ ಅಡಿಯಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬೆಂಬಲ ನೀಡದಿದ್ದರೆ ಜನರೇ ಅವರನ್ನು ತಿರಸ್ಕರಿಸಲಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಅಪರೂಪದ ಪ್ರತಿಭಟನೆಯಾಗಿ ಈ ಧರಣಿಯನ್ನು ನೋಡಲಾಗುತ್ತಿದ್ದು, ಲಡಾಖ್ ಪ್ರತಿಭಟನೆಯ ಕಾರಣಕ್ಕೆ ಇತ್ತೀಚೆಗಷ್ಟೇ ವಾಂಗ್‌ಚುಕ್ ಆರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಮತ್ತೊಂದೆಡೆ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ರಾಹುಲ್ ಗಾಂಧಿ ಅವರಿಗೆ ಕರೆ ನೀಡಿದ್ದು, ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸುವಂತೆ ಕೋರಿದ್ದಾರೆ. “ನಾನೂ ಹೋಗುತ್ತೇನೆ, ರಾಹುಲ್ ಗಾಂಧಿ ಜೀ ಕೂಡ ಹೋಗಬೇಕು. ದೇಶದ ಯುವಶಕ್ತಿಯ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬರೂ ಈ ಹೋರಾಟಕ್ಕೆ ರಸ್ತೆಗಿಳಿದು ಬೆಂಬಲ ನೀಡಬೇಕು” ಎಂದು ಹೇಳಿರುವ ಠಾಕ್ರೆ, ಜುಲೈ 20 ರಂದು ಜಂತರ್ ಮಂತರ್‌ಗೆ ಭೇಟಿ ನೀಡುವುದಾಗಿ ಪ್ರಕಟಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಸಂಜಯ್ ಸಿಂಗ್ ಮತ್ತು ಅತಿಶಿ, ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಮತ್ತು ಕೀರ್ತಿ ಆಜಾದ್, ಸಿಪಿಐ(ಎಂ)ನ ಎಂ.ಎ. ಬೇಬಿ, ಬೃಂದಾ ಕಾರಟ್ ಮತ್ತು ಕೇರಳದ ನಾಯಕಿ ಕೆ.ಕೆ. ಶೈಲಜಾ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಈಗಾಗಲೇ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೂ, ಕಾಂಗ್ರೆಸ್ ಈವರೆಗೆ ಅಧಿಕೃತವಾಗಿ ಈ ಪ್ರತಿಭಟನೆಗೆ ಬೆಂಬಲ ಘೋಷಿಸಿಲ್ಲ. ಆದಾಗ್ಯೂ, ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಧ್ವನಿ) ಸಭೆಯ ಭಾಗವಾಗಿ ಜುಲೈ 17 ರಂದು ಡೆಹ್ರಾಡೂನ್‌ನಲ್ಲಿ ರಾಹುಲ್ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸುವ ಕಾರ್ಯಕ್ರಮವಿದೆ.

ಇದೇ ವೇಳೆ, 2024ರ ಲೋಕಸಭಾ ಚುನಾವಣೆಯಲ್ಲಿ ತಾವು ಗೆದ್ದಿದ್ದ ಎರಡು ಕ್ಷೇತ್ರಗಳ ಪೈಕಿ ಅಮೇಠಿ (ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ) ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡು ಕ್ಷೇತ್ರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಹಸ್ತಾಂತರಿಸಿದ್ದ ರಾಹುಲ್ ಗಾಂಧಿ, ಈಗ ವಯನಾಡು ಭೀಕರ ಮಳೆ ಮತ್ತು ಭೂಕುಸಿತದ ದುರಂತವನ್ನು ಎದುರಿಸುತ್ತಿದ್ದರೂ ಇಬ್ಬರೂ ಅಲ್ಲಿಗೆ ಭೇಟಿ ನೀಡದಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಬಿಜೆಪಿಯು ತನ್ನ ಅಧಿಕೃತ ‘X’ (ಟ್ವಿಟರ್) ಖಾತೆಯಲ್ಲಿ ಬಾಲಿವುಡ್‌ನ ಪ್ರಸಿದ್ಧ ಚಿತ್ರಗೀತೆಯ ಸಾಲುಗಳಾದ “ಚಿಟ್ಟಿ ನಾ ಕೋಯಿ ಸಂದೇಶ್, ಜಾನೇ ವೋ ಕೌನ್ ಸಾ ದೇಶ್, ಜಹಾನ್ ತುಮ್ ಚಲೇ ಗಯೇ” (ಯಾವ ಪತ್ರವೂ ಇಲ್ಲ, ಸಂದೇಶವೂ ಇಲ್ಲ, ನೀನು ಯಾವ ದೇಶಕ್ಕೆ ಹೊರಟುಹೋದೆ ಎಂಬೂದು ತಿಳಿಯುತ್ತಿಲ್ಲ) ಎಂದು ಬರೆಯುವ ಮೂಲಕ ರಾಹುಲ್ ಗಾಂಧಿ ಅವರನ್ನು ಕಾವ್ಯಾತ್ಮಕವಾಗಿ ಕಾಲೆಳೆದಿದೆ.

ಅಯೋಧ್ಯೆಯ ಪ್ರತಿಷ್ಠಿತ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಕಳ್ಳತನದ ಆಘಾತಕಾರಿ ಸಂಗತಿಗಳು ಹೊರಬಿದ್ದ ನಂತರ, ಉತ್ತರ ಪ್ರದೇಶದ ರಾಜಕೀಯವು ಅತ್ಯಂತ ಕುತೂಹಲಕಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ವಿಶ್ವ ಹಿಂದೂ ಪರಿಷತ್ (VHP) ಶಿಫಾರಸುಗಳ ಮೇರೆಗೆ ನರೇಂದ್ರ ಮೋದಿ ಸರ್ಕಾರವು ರಚಿಸಿರುವ ಟ್ರಸ್ಟ್ ಈ ಮಂದಿರದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.

ಆದರೆ, ಆರ್‌ಎಸ್‌ಎಸ್ (RSS) ವಿರುದ್ಧ ವಾಗ್ದಾಳಿ ನಡೆಸಲು ಸಿಗುವ ಯಾವುದೇ ಸಣ್ಣ ಅವಕಾಶವನ್ನೂ ಎಂದಿಗೂ ಕೈಬಿಡದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಈ ವಿಷಯದಲ್ಲಿ ಸಂಪೂರ್ಣ ಮೌನ ವಹಿಸಿದ್ದಾರೆ. ಈವರೆಗೂ ಅವರ ಕಡೆಯಿಂದ ಒಂದು ಅಧಿಕೃತ ಹೇಳಿಕೆಯಾಗಲಿ ಅಥವಾ ಟ್ವೀಟ್ ಆಗಲಿ ಬಂದಿಲ್ಲ.

ದೇಶದ ಸಣ್ಣಪುಟ್ಟ ವಿದ್ಯಮಾನಗಳಿಗೂ ಆಡಳಿತ ಪಕ್ಷದ ಮತ್ತು ಪ್ರಧಾನಿಯವರ ಮೌನವನ್ನು ನಿರಂತರವಾಗಿ ಪ್ರಶ್ನಿಸುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗ ದೇಶವನ್ನು ಕಾಡುತ್ತಿರುವ ಪ್ರಮುಖ ವಿದ್ಯಮಾನಗಳ ಕುರಿತು ತಾವೇ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...