Homeಮುಖಪುಟಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

- Advertisement -
- Advertisement -

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಜನರಿಗೆ ಭರವಸೆ ಆಗಬೇಕಿರುವ ವಿರೋಧ ಪಕ್ಷದ ನಾಯಕರಾದವರೊಬ್ಬರು ಕನಿಷ್ಠ ಒಂದು ಅಧಿಕೃತ ಹೇಳಿಕೆಯನ್ನೂ ನೀಡದೆ ಸಾರ್ವಜನಿಕ ರಂಗದಿಂದ ದೂರ ಉಳಿದಿರುವುದು, ‘ಮೋದಿಯವರ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ ವಹಿಸಿದ್ದಾರೆ?’ ಎಂಬ ನ್ಯಾಯಸಮ್ಮತ ಪ್ರಶ್ನೆಯನ್ನು ಸಾರ್ವಜನಿಕರೇ ನೇರವಾಗಿ ಎತ್ತುವಂತೆ ಮಾಡಿದೆ.

ದೇಶದಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದರೆ, ಇತ್ತ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಕನಿಷ್ಠ ಎಂಟು ಮಂದಿ ಬಲಿಯಾಗಿದ್ದಾರೆ. ಅಯೋಧ್ಯೆಯ ಪ್ರತಿಷ್ಠಿತ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಕಳ್ಳತನದಂತಹ ಗಂಭೀರ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳದಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ನೀಟ್ (NEET) ಪರೀಕ್ಷಾ ಅಕ್ರಮಗಳ ಸಂದರ್ಭದಲ್ಲಿ ಭಾರತದ ಪ್ರಮುಖ ಕೋಚಿಂಗ್ ಹಬ್ ಆದ ಕೋಟಾಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ಯುವಜನರ ಪ್ರತಿಭಟನೆಯಲ್ಲಿ ನೇರವಾಗಿ ಭಾಗವಹಿಸದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪರೀಕ್ಷಾ ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್, “ಯುವಜನರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದಲ್ಲಿ ವಿರೋಧ ಪಕ್ಷಗಳು ಭಾಗವಹಿಸದೇ ಹೋದರೆ ಅದು ಅವರ ‘ಸಣ್ಣತನ’ ಆಗುತ್ತದೆ. ನೀಟ್ ಅಕ್ರಮದ ವಿರುದ್ಧ ಸಿಜೆಪಿ ನೀಡಿರುವ ಕರೆಯ ಅಡಿಯಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬೆಂಬಲ ನೀಡದಿದ್ದರೆ ಜನರೇ ಅವರನ್ನು ತಿರಸ್ಕರಿಸಲಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಅಪರೂಪದ ಪ್ರತಿಭಟನೆಯಾಗಿ ಈ ಧರಣಿಯನ್ನು ನೋಡಲಾಗುತ್ತಿದ್ದು, ಲಡಾಖ್ ಪ್ರತಿಭಟನೆಯ ಕಾರಣಕ್ಕೆ ಇತ್ತೀಚೆಗಷ್ಟೇ ವಾಂಗ್‌ಚುಕ್ ಆರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಮತ್ತೊಂದೆಡೆ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ರಾಹುಲ್ ಗಾಂಧಿ ಅವರಿಗೆ ಕರೆ ನೀಡಿದ್ದು, ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸುವಂತೆ ಕೋರಿದ್ದಾರೆ. “ನಾನೂ ಹೋಗುತ್ತೇನೆ, ರಾಹುಲ್ ಗಾಂಧಿ ಜೀ ಕೂಡ ಹೋಗಬೇಕು. ದೇಶದ ಯುವಶಕ್ತಿಯ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬರೂ ಈ ಹೋರಾಟಕ್ಕೆ ರಸ್ತೆಗಿಳಿದು ಬೆಂಬಲ ನೀಡಬೇಕು” ಎಂದು ಹೇಳಿರುವ ಠಾಕ್ರೆ, ಜುಲೈ 20 ರಂದು ಜಂತರ್ ಮಂತರ್‌ಗೆ ಭೇಟಿ ನೀಡುವುದಾಗಿ ಪ್ರಕಟಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಸಂಜಯ್ ಸಿಂಗ್ ಮತ್ತು ಅತಿಶಿ, ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಮತ್ತು ಕೀರ್ತಿ ಆಜಾದ್, ಸಿಪಿಐ(ಎಂ)ನ ಎಂ.ಎ. ಬೇಬಿ, ಬೃಂದಾ ಕಾರಟ್ ಮತ್ತು ಕೇರಳದ ನಾಯಕಿ ಕೆ.ಕೆ. ಶೈಲಜಾ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಈಗಾಗಲೇ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೂ, ಕಾಂಗ್ರೆಸ್ ಈವರೆಗೆ ಅಧಿಕೃತವಾಗಿ ಈ ಪ್ರತಿಭಟನೆಗೆ ಬೆಂಬಲ ಘೋಷಿಸಿಲ್ಲ. ಆದಾಗ್ಯೂ, ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಧ್ವನಿ) ಸಭೆಯ ಭಾಗವಾಗಿ ಜುಲೈ 17 ರಂದು ಡೆಹ್ರಾಡೂನ್‌ನಲ್ಲಿ ರಾಹುಲ್ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸುವ ಕಾರ್ಯಕ್ರಮವಿದೆ.

ಇದೇ ವೇಳೆ, 2024ರ ಲೋಕಸಭಾ ಚುನಾವಣೆಯಲ್ಲಿ ತಾವು ಗೆದ್ದಿದ್ದ ಎರಡು ಕ್ಷೇತ್ರಗಳ ಪೈಕಿ ಅಮೇಠಿ (ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ) ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡು ಕ್ಷೇತ್ರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಹಸ್ತಾಂತರಿಸಿದ್ದ ರಾಹುಲ್ ಗಾಂಧಿ, ಈಗ ವಯನಾಡು ಭೀಕರ ಮಳೆ ಮತ್ತು ಭೂಕುಸಿತದ ದುರಂತವನ್ನು ಎದುರಿಸುತ್ತಿದ್ದರೂ ಇಬ್ಬರೂ ಅಲ್ಲಿಗೆ ಭೇಟಿ ನೀಡದಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಬಿಜೆಪಿಯು ತನ್ನ ಅಧಿಕೃತ ‘X’ (ಟ್ವಿಟರ್) ಖಾತೆಯಲ್ಲಿ ಬಾಲಿವುಡ್‌ನ ಪ್ರಸಿದ್ಧ ಚಿತ್ರಗೀತೆಯ ಸಾಲುಗಳಾದ “ಚಿಟ್ಟಿ ನಾ ಕೋಯಿ ಸಂದೇಶ್, ಜಾನೇ ವೋ ಕೌನ್ ಸಾ ದೇಶ್, ಜಹಾನ್ ತುಮ್ ಚಲೇ ಗಯೇ” (ಯಾವ ಪತ್ರವೂ ಇಲ್ಲ, ಸಂದೇಶವೂ ಇಲ್ಲ, ನೀನು ಯಾವ ದೇಶಕ್ಕೆ ಹೊರಟುಹೋದೆ ಎಂಬೂದು ತಿಳಿಯುತ್ತಿಲ್ಲ) ಎಂದು ಬರೆಯುವ ಮೂಲಕ ರಾಹುಲ್ ಗಾಂಧಿ ಅವರನ್ನು ಕಾವ್ಯಾತ್ಮಕವಾಗಿ ಕಾಲೆಳೆದಿದೆ.

ಅಯೋಧ್ಯೆಯ ಪ್ರತಿಷ್ಠಿತ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಕಳ್ಳತನದ ಆಘಾತಕಾರಿ ಸಂಗತಿಗಳು ಹೊರಬಿದ್ದ ನಂತರ, ಉತ್ತರ ಪ್ರದೇಶದ ರಾಜಕೀಯವು ಅತ್ಯಂತ ಕುತೂಹಲಕಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ವಿಶ್ವ ಹಿಂದೂ ಪರಿಷತ್ (VHP) ಶಿಫಾರಸುಗಳ ಮೇರೆಗೆ ನರೇಂದ್ರ ಮೋದಿ ಸರ್ಕಾರವು ರಚಿಸಿರುವ ಟ್ರಸ್ಟ್ ಈ ಮಂದಿರದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.

ಆದರೆ, ಆರ್‌ಎಸ್‌ಎಸ್ (RSS) ವಿರುದ್ಧ ವಾಗ್ದಾಳಿ ನಡೆಸಲು ಸಿಗುವ ಯಾವುದೇ ಸಣ್ಣ ಅವಕಾಶವನ್ನೂ ಎಂದಿಗೂ ಕೈಬಿಡದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಈ ವಿಷಯದಲ್ಲಿ ಸಂಪೂರ್ಣ ಮೌನ ವಹಿಸಿದ್ದಾರೆ. ಈವರೆಗೂ ಅವರ ಕಡೆಯಿಂದ ಒಂದು ಅಧಿಕೃತ ಹೇಳಿಕೆಯಾಗಲಿ ಅಥವಾ ಟ್ವೀಟ್ ಆಗಲಿ ಬಂದಿಲ್ಲ.

ದೇಶದ ಸಣ್ಣಪುಟ್ಟ ವಿದ್ಯಮಾನಗಳಿಗೂ ಆಡಳಿತ ಪಕ್ಷದ ಮತ್ತು ಪ್ರಧಾನಿಯವರ ಮೌನವನ್ನು ನಿರಂತರವಾಗಿ ಪ್ರಶ್ನಿಸುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈಗ ದೇಶವನ್ನು ಕಾಡುತ್ತಿರುವ ಪ್ರಮುಖ ವಿದ್ಯಮಾನಗಳ ಕುರಿತು ತಾವೇ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...