Homeಕರ್ನಾಟಕರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

ರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

- Advertisement -
- Advertisement -

ಯಕ್ಷಗಾನ ಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿಯ ಎಂಜಿಎಂ ಕಾಲೇಜಿನ ಎ.ಎಲ್‌.ಎನ್‌. ರಾವ್‌ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಫೆ. 11, 12ರಂದು ಆಯೋಜಿಸಲಾಗಿದ್ದು, ಈ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಲೇಖಕ ರೋಹಿತ್‌ ಚಕ್ರತೀರ್ಥರಿಗೆ ಅವಕಾಶ ನೀಡಲಾಗಿದೆ. ಇದೀಗ ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

”ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ” ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಹಸರಾಂತ ಕಲಾವಿದರಾದ ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಅವಕಾಶ ನೀಡಿದ್ದು ಸರಿಯಲ್ಲ. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಇತ್ತೀಚೆಗೆ ನಡೆದ ಮಲ್ಪೆ ಬೀಚ್‌ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಬಿಜೆಪಿ ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರೋಹಿತ್ ಚಕ್ರತೀರ್ಥ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ, ಹಾಗಾಗಿ ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆಯಾ  ಎನ್ನುವ ಸಂಶಯ ಮೂಡುತ್ತಿದೆ.

ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಉಡುಪಿಯಲ್ಲಿ ನಡೆಯುತ್ತಿರುವುದು ಇದೇ ಮೊದಲ ಬಾರಿಗೆ, ಇದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚುವ ಮೂಲಕ ವಿವಾದಕ್ಕೀಡಾಗಿರುವ ರೋಹಿತ್ ಚಕ್ರತೀರ್ಥಯನ್ನ ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ಅನೇಕ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬಂದಿದ್ದವು. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿತ್ತು. ಇಂತಹ ನಾಡದ್ರೋಹಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದು ನಾಡಿನ ಪ್ರಜ್ಞಾವಂತ ಜನರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...