Homeಕರ್ನಾಟಕರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

ರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

- Advertisement -
- Advertisement -

ಯಕ್ಷಗಾನ ಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿಯ ಎಂಜಿಎಂ ಕಾಲೇಜಿನ ಎ.ಎಲ್‌.ಎನ್‌. ರಾವ್‌ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಫೆ. 11, 12ರಂದು ಆಯೋಜಿಸಲಾಗಿದ್ದು, ಈ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಲೇಖಕ ರೋಹಿತ್‌ ಚಕ್ರತೀರ್ಥರಿಗೆ ಅವಕಾಶ ನೀಡಲಾಗಿದೆ. ಇದೀಗ ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

”ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ” ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಹಸರಾಂತ ಕಲಾವಿದರಾದ ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಅವಕಾಶ ನೀಡಿದ್ದು ಸರಿಯಲ್ಲ. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಇತ್ತೀಚೆಗೆ ನಡೆದ ಮಲ್ಪೆ ಬೀಚ್‌ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಬಿಜೆಪಿ ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರೋಹಿತ್ ಚಕ್ರತೀರ್ಥ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ, ಹಾಗಾಗಿ ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆಯಾ  ಎನ್ನುವ ಸಂಶಯ ಮೂಡುತ್ತಿದೆ.

ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಉಡುಪಿಯಲ್ಲಿ ನಡೆಯುತ್ತಿರುವುದು ಇದೇ ಮೊದಲ ಬಾರಿಗೆ, ಇದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚುವ ಮೂಲಕ ವಿವಾದಕ್ಕೀಡಾಗಿರುವ ರೋಹಿತ್ ಚಕ್ರತೀರ್ಥಯನ್ನ ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ಅನೇಕ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬಂದಿದ್ದವು. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿತ್ತು. ಇಂತಹ ನಾಡದ್ರೋಹಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದು ನಾಡಿನ ಪ್ರಜ್ಞಾವಂತ ಜನರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...