Homeಕರ್ನಾಟಕಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘ ( ಆರ್‌ಎಸ್‌ಎಸ್‌) ನೋಂದಣಿ ಏಕೆ ಮಾಡಿಕೊಂಡಿಲ್ಲ? ಎಂಬ ಪ್ರಶ್ನೆಯ ಸುತ್ತ ಚರ್ಚೆಗಳು ಇತ್ತೀಚೆಗೆ ಕಾವು ಪಡೆದುಕೊಂಡಿವೆ. ಪರಿಣಾಮ, ಸಾಮಾನ್ಯ ಜನರೂ ಕೂಡ ಆರ್‌ಎಸ್‌ಎಸ್‌ ಭಾರತೀಯ ಕಾನೂನಿನಡಿ ನೋಂದಣಿ ಏಕೆ ಮಾಡಿಕೊಂಡಿಲ್ಲ ಎಂಬ ಪ್ರಶ್ನೆ ಕೇಳಲು ಶುರು ಮಾಡಿದ್ದಾರೆ.

ಇದರಿಂದ ಆರ್‌ಎಸ್‌ಎಸ್‌ ದೇಶದ ಜನತೆಗೆ ಉತ್ತರ ಕೊಡಲೇಬೇಕಾದ ಇಕ್ಕಟ್ಟಿಗೆ ಸಿಲುಕಿದಂತಿದೆ. ಏಕೆಂದರೆ, ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್‌ 100ನೇ ವರ್ಷಾಚರಣೆ ಸಂಬಂಧಿತ ಕಾರ್ಯಕ್ರಮದಲ್ಲಿ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ನಗರ ಪಿಇಎಸ್‌ ವಿಶ್ವವಿದ್ಯಾಲಯದ ಸಂಭಾಗಣದಲ್ಲಿ ಭಾನುವಾರ (ನ.10) ಆಯೋಜಿಸಿದ್ದ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್ ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಳ್ಳದ್ದನ್ನು ಸಮರ್ಥಿಸಿಕೊಂಡಿದ್ದಾರೆ.

“ನಮ್ಮದು ಕಾನೂನುಬದ್ಧವಾಗಿ ಗುರುತಿಸಲ್ಪಟ್ಟ ‘ವ್ಯಕ್ತಿಗಳ ಸಂಸ್ಥೆ’. ಆದ್ದರಿಂದ ಭಾರತೀಯ ಕಾನೂನಿನಡಿಯಲ್ಲಿ ನೋಂದಣಿ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಸಂಘ 1925ರಲ್ಲಿ ಪ್ರಾರಂಭಗೊಂಡ ಸಂಸ್ಥೆ ಎಂಬುವುದು ನಿಮಗೆ ಗೊತ್ತಾ? ಆಗ ಬ್ರಿಟಿಷ್ ಸರ್ಕಾರದ ವಿರುದ್ದ ಹೋರಾಡುತ್ತಿದ್ದ ನಮ್ಮ ಸರಸಂಘ ಚಾಲಕ (ಕೆ.ಬಿ ಹೆಡ್ಗೇವಾರ್ ) ಅವರು ಬ್ರಿಟಿಷ್ ಸರ್ಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯದ ನಂತರ, ಭಾರತೀಯ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಿಲ್ಲ. ನೋಂದಣಿಯಾಗದ ವ್ಯಕ್ತಿಗಳ ಸಮೂಹಕ್ಕೂ (body of individuals) ಕಾನೂನು ಸ್ಥಾನಮಾನ ದೊರೆಯುತ್ತದೆ. ನಾವು ‘ವ್ಯಕ್ತಿಗಳ ಸಮೂಹ’ ಎಂದು ವರ್ಗೀಕೃತರಾಗಿದ್ದೇವೆ. ನಾವು ಗುರುತಿಸಲ್ಪಟ್ಟ ಸಂಸ್ಥೆಯಾಗಿದ್ದೇವೆ” ಎಂದಿದ್ದಾರೆ.

ಆರ್‌ಎಸ್‌ಎಸ್‌ನ ಕಾನೂನುಬದ್ಧ ಸ್ಥಾನಮಾನವನ್ನು ಒತ್ತಿ ಹೇಳಲು ಹಿಂದಿನ ಕಾನೂನು ವಿವಾದವನ್ನು ಉಲ್ಲೇಖಿಸಿದ ಭಾಗವತ್, “ಆದಾಯ ತೆರಿಗೆ ಇಲಾಖೆ ತೆರಿಗೆ ವಿಧಿಸಲು ಪ್ರಯತ್ನಿಸಿದಾಗ ನ್ಯಾಯಾಲಯಗಳು ‘ವ್ಯಕ್ತಿಗಳ ಸಂಸ್ಥೆ’ಯಾಗಿ ಸಂಘದ ಸ್ಥಾನವನ್ನು ಎತ್ತಿಹಿಡಿದು, ಅದರ ಗುರುದಕ್ಷಿಣೆ (ವಿದ್ಯಾರ್ಥಿಯಿಂದ ಶಿಕ್ಷಕರಿಗೆ ಸ್ವಯಂಪ್ರೇರಿತ ಕೊಡುಗೆ) ತೆರಿಗೆಯಿಂದ ವಿನಾಯಿತಿ ಪಡೆದಿದೆ ಎಂದು ತೀರ್ಪು ನೀಡಿತ್ತು” ಎಂದು ಹೇಳಿದ್ದಾರೆ.

ಸರ್ಕಾರವು ಸಂಘವನ್ನು ಗುರುತಿಸಿರುವುದಕ್ಕೆ ಪುರಾವೆಯಾಗಿ ಈ ಹಿಂದೆ ಹಲವು ಬಾರಿ ಸಂಘ ನಿಷೇಧಕ್ಕೊಳಗಾಗಿರುವುದನ್ನು ಭಾಗವತ್ ಪ್ರಸ್ತಾಪಿಸಿದ್ದು, “ನಮ್ಮನ್ನು ಮೂರು ಬಾರಿ ನಿಷೇಧಿಸಲಾಗಿತ್ತು. ಹಾಗಾಗಿ, ನಮ್ಮ ಸಂಘಟನೆಯನ್ನು ಸರ್ಕಾರ ಗುರುತಿಸಿದೆ ಎಂದಾಯಿತಲ್ಲವೇ? ಇಲ್ಲದಿದ್ದರೆ, ಅವರು ಯಾರನ್ನು ನಿಷೇಧಿಸುತ್ತಿದ್ದರು? ಪ್ರತಿ ಬಾರಿಯೂ ನ್ಯಾಯಾಲಯಗಳು ನಿಷೇಧವನ್ನು ವಜಾಗೊಳಿಸಿ ಆರ್‌ಎಸ್‌ಎಸ್ ಅನ್ನು ಕಾನೂನುಬದ್ಧ ಸಂಘಟನೆಯನ್ನಾಗಿ ಮಾಡಿವೆ” ಎಂದಿದ್ದಾರೆ.

ಸಂಘದ ಸಾಂವಿಧಾನಿಕ ನ್ಯಾಯಸಮ್ಮತತೆಯನ್ನು ಸಮರ್ಥಿಸಿದ ಭಾಗವತ್, “ನಾವು ಸಂವಿಧಾನಬಾಹಿರರಲ್ಲ. ನಮ್ಮ ಕಾನೂನು ಸ್ಥಾನಮಾನ ಸಂವಿಧಾನದೊಳಗೆ ಇದೆ. ಆದ್ದರಿಂದ ನಾವು ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ. ಅನೇಕ ವಿಷಯಗಳನ್ನು ನೋಂದಾಯಿಸಲಾಗಿಲ್ಲ, ಹಿಂದೂ ಧರ್ಮವನ್ನೂ ಕೂಡ ನೋಂದಾಯಿಸಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಭಾಗವತ್ ಅವರು ಆರ್‌ಎಸ್‌ಎಸ್‌ನ ನೋಂದಣಿ, ಭಾರತೀಯ ಸಂವಿಧಾನ ಮತ್ತು ಅದರಡಿಯ ಕಾನೂನುಗಳನ್ನು ಸಂಘ ಅನುಸರಿಸುವ ಬಗೆ, ಭಾರತದ ತ್ರಿವರ್ಣ ಧ್ವಜ ಮತ್ತು ಆರ್‌ಎಸ್‌ಎಸ್‌ನ ಭಗವಾಧ್ವಜ, ಆರ್‌ಎಸ್‌ಎಸ್‌ನ ಹಣದ ಮೂಲ ಇತ್ಯಾದಿಗಳ ಬಗ್ಗೆ ಇಷ್ಟೊಂದು ಬಹಿರಂಗವಾಗಿ ಮಾತನಾಡಿರುವುದು ಇದೇ ಮೊದಲು ಎನ್ನಬಹುದು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಕೇಳಿದ ಪ್ರಶ್ನೆಗಳು, ಅದಕ್ಕೆ ವ್ಯಕ್ತವಾದ ಪರ-ವಿರೋಧ ಅಭಿಪ್ರಾಯಗಳು ಭಾಗವತ್ ಹೇಳಿರುವ ವಿಷಯಗಳ ಕುರಿತು ಜನರಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಆರ್‌ಎಸ್‌ಎಸ್‌ ಭಾರತದ ಸಂವಿಧಾನದಡಿಯ ಕಾನೂನ ಅನ್ವಯ ನೋಂದಣಿಯಾಗದ ಸಂಘಟನೆ, ಅದು ಇನ್ನೂ ಏಕೆ ನೋಂದಣಿ ಮಾಡಿಕೊಂಡಿಲ್ಲ? ಸಂಘದ ಹಣದ ಮೂಲ ಯಾವುದು? ಇತ್ಯಾದಿ ಪ್ರಶ್ನೆಗಳನ್ನು ಪ್ರಿಯಾಂಕ್ ಖರ್ಗೆ ಸರಣಿಯಾಗಿ ಕೇಳಿದ್ದರು. ಇದು ಜನರಲ್ಲಿ ಚರ್ಚೆ ಹಚ್ಚಿ ಭಾಗವತ್ ಉತ್ತರ ಕೊಡುವಂತೆ ಮಾಡಿದೆ.

ಭಾಗವತ್ ನೀಡಿರುವ ಉತ್ತರಗಳ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ಭಾರತದಲ್ಲಿ ಪ್ರತಿಯೊಂದು ಧಾರ್ಮಿಕ ಅಥವಾ ದತ್ತಿ ಸಂಸ್ಥೆಗಳೂ ಹಣಕಾಸು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕಿರುವಾಗ, ಆರ್‌ಎಸ್‌ಎಸ್‌ಗೆ ಇದೇ ರೀತಿಯ ಜವಾಬ್ದಾರಿ ವ್ಯವಸ್ಥೆಗಳು ಇಲ್ಲದಿರುವುದನ್ನು ಏನು ಸಮರ್ಥಿಸುತ್ತದೆ? ಇದಲ್ಲದೆ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಯಾರು? ಅವರ ಸಂಖ್ಯೆ ಎಷ್ಟು? ಅವರನ್ನು ಹೇಗೆ ಗುರುತಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ಗೆ ನೀಡಲಾಗುವ ದೇಣಿಗೆಗಳ ಪ್ರಮಾಣ ಮತ್ತು ಸ್ವರೂಪ ಏನು? ಈ ಕೊಡುಗೆಗಳನ್ನು ಯಾವ ಕಾರ್ಯವಿಧಾನಗಳು ಅಥವಾ ಮಾರ್ಗಗಳ ಮೂಲಕ ಸ್ವೀಕರಿಸಲಾಗುತ್ತದೆ? ಆರ್‌ಎಸ್‌ಎಸ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತನ್ನದೇ ಆದ ನೋಂದಾಯಿತ ಗುರುತಿನ ಅಡಿಯಲ್ಲಿ ಸಂಸ್ಥೆಗೆ ನೇರವಾಗಿ ದೇಣಿಗೆಗಳನ್ನು ಏಕೆ ನೀಡಲಾಗುವುದಿಲ್ಲ?” ಎಂದು ಕೇಳಿದ್ದಾರೆ.

“ನೋಂದಾಯಿತ ಸಂಸ್ಥೆಯಲ್ಲದ ಆರ್‌ಎಸ್‌ಎಸ್ ತನ್ನ ಆರ್ಥಿಕ ಮತ್ತು ಸಾಂಸ್ಥಿಕ ರಚನೆಯನ್ನು ಹೇಗೆ ಉಳಿಸಿಕೊಳ್ಳುತ್ತದೆ?”

“ಪೂರ್ಣ ಸಮಯದ ಪ್ರಚಾರಕರಿಗೆ ಯಾರು ಸಹಾಯ ನೀಡುತ್ತಾರೆ ಮತ್ತು ಸಂಸ್ಥೆಯ ದಿನನಿತ್ಯದ ಕಾರ್ಯಾಚರಣೆಯ ವೆಚ್ಚಗಳನ್ನು ಪೂರೈಸುತ್ತಾರೆ? ದೊಡ್ಡ ಪ್ರಮಾಣದ ಕಾರ್ಯಕ್ರಮಗಳು, ಅಭಿಯಾನಗಳು ಮತ್ತು ಪ್ರಚಾರ ಚಟುವಟಿಕೆಗಳಿಗೆ ಹೇಗೆ ಹಣಕಾಸು ಒದಗಿಸಲಾಗುತ್ತದೆ? ಸ್ವಯಂಸೇವಕರು ಸ್ಥಳೀಯ ಕಚೇರಿಗಳಿಂದ ಸಮವಸ್ತ್ರ ಅಥವಾ ವಸ್ತುಗಳನ್ನು ಖರೀದಿಸಿದಾಗ, ಈ ಹಣವನ್ನು ಎಲ್ಲಿಗೆ ಲೆಕ್ಕ ಹಾಕಲಾಗುತ್ತದೆ? ಸ್ಥಳೀಯ ಕಚೇರಿಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ವಹಿಸುವ ವೆಚ್ಚವನ್ನು ಯಾರು ಭರಿಸುತ್ತಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಹಾಕಿದ್ದಾರೆ.

ಈ ಪ್ರಶ್ನೆಗಳು ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಮೂಲಭೂತ ಸಮಸ್ಯೆಯನ್ನು ಒತ್ತಿಹೇಳುತ್ತವೆ ಎಂದಿರುವ ಪ್ರಿಯಾಂಕ್ ಖರ್ಗೆ, “ರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾದ ಉಪಸ್ಥಿತಿ ಮತ್ತು ಪ್ರಭಾವದ ಹೊರತಾಗಿಯೂ ಆರ್‌ಎಸ್‌ಎಸ್ ಏಕೆ ನೋಂದಾಯಿಸದೆ ಉಳಿದಿದೆ?” ಎಂದು ಕೇಳಿದ್ದಾರೆ.

“ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳು, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು, ರಾಷ್ಟ್ರ-ವಿರೋಧಿಯಾಗಿ 100 ವರ್ಷಗಳು” ಎಂದು ಬರೆದುಕೊಳ್ಳುವ ಮೂಲಕ ಆರ್‌ಎಸ್‌ಎಸ್‌ನ 100ನೇ ವರ್ಷಾಚರಣೆಗೆ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

“ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ 24, 1948 ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ. ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್ ಮಾಡಿದ ನಿರ್ಲಜ್ಜ ದ್ರೋಹದ ನಿದರ್ಶನಗಳಿಂದ ತುಂಬಿದೆ. ಮತ್ತು ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ, ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ” ಎಂದು ಬರೆದುಕೊಂಡು ದಾಖಲೆ ಹಂಚಿಕೊಂಡಿದ್ದಾರೆ.

ಮುಸ್ಲಿಮ್‌-ದಲಿತ ಕ್ರೈಸ್ತರಿಗೆ ಎಸ್‌ಸಿ ಸ್ಥಾನಮಾನ; ಪರಿಶೀಲನಾ ಸಮಿತಿ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...