Homeಕರ್ನಾಟಕಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘ ( ಆರ್‌ಎಸ್‌ಎಸ್‌) ನೋಂದಣಿ ಏಕೆ ಮಾಡಿಕೊಂಡಿಲ್ಲ? ಎಂಬ ಪ್ರಶ್ನೆಯ ಸುತ್ತ ಚರ್ಚೆಗಳು ಇತ್ತೀಚೆಗೆ ಕಾವು ಪಡೆದುಕೊಂಡಿವೆ. ಪರಿಣಾಮ, ಸಾಮಾನ್ಯ ಜನರೂ ಕೂಡ ಆರ್‌ಎಸ್‌ಎಸ್‌ ಭಾರತೀಯ ಕಾನೂನಿನಡಿ ನೋಂದಣಿ ಏಕೆ ಮಾಡಿಕೊಂಡಿಲ್ಲ ಎಂಬ ಪ್ರಶ್ನೆ ಕೇಳಲು ಶುರು ಮಾಡಿದ್ದಾರೆ.

ಇದರಿಂದ ಆರ್‌ಎಸ್‌ಎಸ್‌ ದೇಶದ ಜನತೆಗೆ ಉತ್ತರ ಕೊಡಲೇಬೇಕಾದ ಇಕ್ಕಟ್ಟಿಗೆ ಸಿಲುಕಿದಂತಿದೆ. ಏಕೆಂದರೆ, ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್‌ 100ನೇ ವರ್ಷಾಚರಣೆ ಸಂಬಂಧಿತ ಕಾರ್ಯಕ್ರಮದಲ್ಲಿ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ನಗರ ಪಿಇಎಸ್‌ ವಿಶ್ವವಿದ್ಯಾಲಯದ ಸಂಭಾಗಣದಲ್ಲಿ ಭಾನುವಾರ (ನ.10) ಆಯೋಜಿಸಿದ್ದ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್ ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಳ್ಳದ್ದನ್ನು ಸಮರ್ಥಿಸಿಕೊಂಡಿದ್ದಾರೆ.

“ನಮ್ಮದು ಕಾನೂನುಬದ್ಧವಾಗಿ ಗುರುತಿಸಲ್ಪಟ್ಟ ‘ವ್ಯಕ್ತಿಗಳ ಸಂಸ್ಥೆ’. ಆದ್ದರಿಂದ ಭಾರತೀಯ ಕಾನೂನಿನಡಿಯಲ್ಲಿ ನೋಂದಣಿ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಸಂಘ 1925ರಲ್ಲಿ ಪ್ರಾರಂಭಗೊಂಡ ಸಂಸ್ಥೆ ಎಂಬುವುದು ನಿಮಗೆ ಗೊತ್ತಾ? ಆಗ ಬ್ರಿಟಿಷ್ ಸರ್ಕಾರದ ವಿರುದ್ದ ಹೋರಾಡುತ್ತಿದ್ದ ನಮ್ಮ ಸರಸಂಘ ಚಾಲಕ (ಕೆ.ಬಿ ಹೆಡ್ಗೇವಾರ್ ) ಅವರು ಬ್ರಿಟಿಷ್ ಸರ್ಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯದ ನಂತರ, ಭಾರತೀಯ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಿಲ್ಲ. ನೋಂದಣಿಯಾಗದ ವ್ಯಕ್ತಿಗಳ ಸಮೂಹಕ್ಕೂ (body of individuals) ಕಾನೂನು ಸ್ಥಾನಮಾನ ದೊರೆಯುತ್ತದೆ. ನಾವು ‘ವ್ಯಕ್ತಿಗಳ ಸಮೂಹ’ ಎಂದು ವರ್ಗೀಕೃತರಾಗಿದ್ದೇವೆ. ನಾವು ಗುರುತಿಸಲ್ಪಟ್ಟ ಸಂಸ್ಥೆಯಾಗಿದ್ದೇವೆ” ಎಂದಿದ್ದಾರೆ.

ಆರ್‌ಎಸ್‌ಎಸ್‌ನ ಕಾನೂನುಬದ್ಧ ಸ್ಥಾನಮಾನವನ್ನು ಒತ್ತಿ ಹೇಳಲು ಹಿಂದಿನ ಕಾನೂನು ವಿವಾದವನ್ನು ಉಲ್ಲೇಖಿಸಿದ ಭಾಗವತ್, “ಆದಾಯ ತೆರಿಗೆ ಇಲಾಖೆ ತೆರಿಗೆ ವಿಧಿಸಲು ಪ್ರಯತ್ನಿಸಿದಾಗ ನ್ಯಾಯಾಲಯಗಳು ‘ವ್ಯಕ್ತಿಗಳ ಸಂಸ್ಥೆ’ಯಾಗಿ ಸಂಘದ ಸ್ಥಾನವನ್ನು ಎತ್ತಿಹಿಡಿದು, ಅದರ ಗುರುದಕ್ಷಿಣೆ (ವಿದ್ಯಾರ್ಥಿಯಿಂದ ಶಿಕ್ಷಕರಿಗೆ ಸ್ವಯಂಪ್ರೇರಿತ ಕೊಡುಗೆ) ತೆರಿಗೆಯಿಂದ ವಿನಾಯಿತಿ ಪಡೆದಿದೆ ಎಂದು ತೀರ್ಪು ನೀಡಿತ್ತು” ಎಂದು ಹೇಳಿದ್ದಾರೆ.

ಸರ್ಕಾರವು ಸಂಘವನ್ನು ಗುರುತಿಸಿರುವುದಕ್ಕೆ ಪುರಾವೆಯಾಗಿ ಈ ಹಿಂದೆ ಹಲವು ಬಾರಿ ಸಂಘ ನಿಷೇಧಕ್ಕೊಳಗಾಗಿರುವುದನ್ನು ಭಾಗವತ್ ಪ್ರಸ್ತಾಪಿಸಿದ್ದು, “ನಮ್ಮನ್ನು ಮೂರು ಬಾರಿ ನಿಷೇಧಿಸಲಾಗಿತ್ತು. ಹಾಗಾಗಿ, ನಮ್ಮ ಸಂಘಟನೆಯನ್ನು ಸರ್ಕಾರ ಗುರುತಿಸಿದೆ ಎಂದಾಯಿತಲ್ಲವೇ? ಇಲ್ಲದಿದ್ದರೆ, ಅವರು ಯಾರನ್ನು ನಿಷೇಧಿಸುತ್ತಿದ್ದರು? ಪ್ರತಿ ಬಾರಿಯೂ ನ್ಯಾಯಾಲಯಗಳು ನಿಷೇಧವನ್ನು ವಜಾಗೊಳಿಸಿ ಆರ್‌ಎಸ್‌ಎಸ್ ಅನ್ನು ಕಾನೂನುಬದ್ಧ ಸಂಘಟನೆಯನ್ನಾಗಿ ಮಾಡಿವೆ” ಎಂದಿದ್ದಾರೆ.

ಸಂಘದ ಸಾಂವಿಧಾನಿಕ ನ್ಯಾಯಸಮ್ಮತತೆಯನ್ನು ಸಮರ್ಥಿಸಿದ ಭಾಗವತ್, “ನಾವು ಸಂವಿಧಾನಬಾಹಿರರಲ್ಲ. ನಮ್ಮ ಕಾನೂನು ಸ್ಥಾನಮಾನ ಸಂವಿಧಾನದೊಳಗೆ ಇದೆ. ಆದ್ದರಿಂದ ನಾವು ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ. ಅನೇಕ ವಿಷಯಗಳನ್ನು ನೋಂದಾಯಿಸಲಾಗಿಲ್ಲ, ಹಿಂದೂ ಧರ್ಮವನ್ನೂ ಕೂಡ ನೋಂದಾಯಿಸಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಭಾಗವತ್ ಅವರು ಆರ್‌ಎಸ್‌ಎಸ್‌ನ ನೋಂದಣಿ, ಭಾರತೀಯ ಸಂವಿಧಾನ ಮತ್ತು ಅದರಡಿಯ ಕಾನೂನುಗಳನ್ನು ಸಂಘ ಅನುಸರಿಸುವ ಬಗೆ, ಭಾರತದ ತ್ರಿವರ್ಣ ಧ್ವಜ ಮತ್ತು ಆರ್‌ಎಸ್‌ಎಸ್‌ನ ಭಗವಾಧ್ವಜ, ಆರ್‌ಎಸ್‌ಎಸ್‌ನ ಹಣದ ಮೂಲ ಇತ್ಯಾದಿಗಳ ಬಗ್ಗೆ ಇಷ್ಟೊಂದು ಬಹಿರಂಗವಾಗಿ ಮಾತನಾಡಿರುವುದು ಇದೇ ಮೊದಲು ಎನ್ನಬಹುದು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಕೇಳಿದ ಪ್ರಶ್ನೆಗಳು, ಅದಕ್ಕೆ ವ್ಯಕ್ತವಾದ ಪರ-ವಿರೋಧ ಅಭಿಪ್ರಾಯಗಳು ಭಾಗವತ್ ಹೇಳಿರುವ ವಿಷಯಗಳ ಕುರಿತು ಜನರಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಆರ್‌ಎಸ್‌ಎಸ್‌ ಭಾರತದ ಸಂವಿಧಾನದಡಿಯ ಕಾನೂನ ಅನ್ವಯ ನೋಂದಣಿಯಾಗದ ಸಂಘಟನೆ, ಅದು ಇನ್ನೂ ಏಕೆ ನೋಂದಣಿ ಮಾಡಿಕೊಂಡಿಲ್ಲ? ಸಂಘದ ಹಣದ ಮೂಲ ಯಾವುದು? ಇತ್ಯಾದಿ ಪ್ರಶ್ನೆಗಳನ್ನು ಪ್ರಿಯಾಂಕ್ ಖರ್ಗೆ ಸರಣಿಯಾಗಿ ಕೇಳಿದ್ದರು. ಇದು ಜನರಲ್ಲಿ ಚರ್ಚೆ ಹಚ್ಚಿ ಭಾಗವತ್ ಉತ್ತರ ಕೊಡುವಂತೆ ಮಾಡಿದೆ.

ಭಾಗವತ್ ನೀಡಿರುವ ಉತ್ತರಗಳ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ಭಾರತದಲ್ಲಿ ಪ್ರತಿಯೊಂದು ಧಾರ್ಮಿಕ ಅಥವಾ ದತ್ತಿ ಸಂಸ್ಥೆಗಳೂ ಹಣಕಾಸು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕಿರುವಾಗ, ಆರ್‌ಎಸ್‌ಎಸ್‌ಗೆ ಇದೇ ರೀತಿಯ ಜವಾಬ್ದಾರಿ ವ್ಯವಸ್ಥೆಗಳು ಇಲ್ಲದಿರುವುದನ್ನು ಏನು ಸಮರ್ಥಿಸುತ್ತದೆ? ಇದಲ್ಲದೆ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಯಾರು? ಅವರ ಸಂಖ್ಯೆ ಎಷ್ಟು? ಅವರನ್ನು ಹೇಗೆ ಗುರುತಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ಗೆ ನೀಡಲಾಗುವ ದೇಣಿಗೆಗಳ ಪ್ರಮಾಣ ಮತ್ತು ಸ್ವರೂಪ ಏನು? ಈ ಕೊಡುಗೆಗಳನ್ನು ಯಾವ ಕಾರ್ಯವಿಧಾನಗಳು ಅಥವಾ ಮಾರ್ಗಗಳ ಮೂಲಕ ಸ್ವೀಕರಿಸಲಾಗುತ್ತದೆ? ಆರ್‌ಎಸ್‌ಎಸ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತನ್ನದೇ ಆದ ನೋಂದಾಯಿತ ಗುರುತಿನ ಅಡಿಯಲ್ಲಿ ಸಂಸ್ಥೆಗೆ ನೇರವಾಗಿ ದೇಣಿಗೆಗಳನ್ನು ಏಕೆ ನೀಡಲಾಗುವುದಿಲ್ಲ?” ಎಂದು ಕೇಳಿದ್ದಾರೆ.

“ನೋಂದಾಯಿತ ಸಂಸ್ಥೆಯಲ್ಲದ ಆರ್‌ಎಸ್‌ಎಸ್ ತನ್ನ ಆರ್ಥಿಕ ಮತ್ತು ಸಾಂಸ್ಥಿಕ ರಚನೆಯನ್ನು ಹೇಗೆ ಉಳಿಸಿಕೊಳ್ಳುತ್ತದೆ?”

“ಪೂರ್ಣ ಸಮಯದ ಪ್ರಚಾರಕರಿಗೆ ಯಾರು ಸಹಾಯ ನೀಡುತ್ತಾರೆ ಮತ್ತು ಸಂಸ್ಥೆಯ ದಿನನಿತ್ಯದ ಕಾರ್ಯಾಚರಣೆಯ ವೆಚ್ಚಗಳನ್ನು ಪೂರೈಸುತ್ತಾರೆ? ದೊಡ್ಡ ಪ್ರಮಾಣದ ಕಾರ್ಯಕ್ರಮಗಳು, ಅಭಿಯಾನಗಳು ಮತ್ತು ಪ್ರಚಾರ ಚಟುವಟಿಕೆಗಳಿಗೆ ಹೇಗೆ ಹಣಕಾಸು ಒದಗಿಸಲಾಗುತ್ತದೆ? ಸ್ವಯಂಸೇವಕರು ಸ್ಥಳೀಯ ಕಚೇರಿಗಳಿಂದ ಸಮವಸ್ತ್ರ ಅಥವಾ ವಸ್ತುಗಳನ್ನು ಖರೀದಿಸಿದಾಗ, ಈ ಹಣವನ್ನು ಎಲ್ಲಿಗೆ ಲೆಕ್ಕ ಹಾಕಲಾಗುತ್ತದೆ? ಸ್ಥಳೀಯ ಕಚೇರಿಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ವಹಿಸುವ ವೆಚ್ಚವನ್ನು ಯಾರು ಭರಿಸುತ್ತಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಹಾಕಿದ್ದಾರೆ.

ಈ ಪ್ರಶ್ನೆಗಳು ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಮೂಲಭೂತ ಸಮಸ್ಯೆಯನ್ನು ಒತ್ತಿಹೇಳುತ್ತವೆ ಎಂದಿರುವ ಪ್ರಿಯಾಂಕ್ ಖರ್ಗೆ, “ರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾದ ಉಪಸ್ಥಿತಿ ಮತ್ತು ಪ್ರಭಾವದ ಹೊರತಾಗಿಯೂ ಆರ್‌ಎಸ್‌ಎಸ್ ಏಕೆ ನೋಂದಾಯಿಸದೆ ಉಳಿದಿದೆ?” ಎಂದು ಕೇಳಿದ್ದಾರೆ.

“ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳು, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು, ರಾಷ್ಟ್ರ-ವಿರೋಧಿಯಾಗಿ 100 ವರ್ಷಗಳು” ಎಂದು ಬರೆದುಕೊಳ್ಳುವ ಮೂಲಕ ಆರ್‌ಎಸ್‌ಎಸ್‌ನ 100ನೇ ವರ್ಷಾಚರಣೆಗೆ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

“ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ 24, 1948 ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ. ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್ ಮಾಡಿದ ನಿರ್ಲಜ್ಜ ದ್ರೋಹದ ನಿದರ್ಶನಗಳಿಂದ ತುಂಬಿದೆ. ಮತ್ತು ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ, ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ” ಎಂದು ಬರೆದುಕೊಂಡು ದಾಖಲೆ ಹಂಚಿಕೊಂಡಿದ್ದಾರೆ.

ಮುಸ್ಲಿಮ್‌-ದಲಿತ ಕ್ರೈಸ್ತರಿಗೆ ಎಸ್‌ಸಿ ಸ್ಥಾನಮಾನ; ಪರಿಶೀಲನಾ ಸಮಿತಿ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...