Homeಕರ್ನಾಟಕಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘ ( ಆರ್‌ಎಸ್‌ಎಸ್‌) ನೋಂದಣಿ ಏಕೆ ಮಾಡಿಕೊಂಡಿಲ್ಲ? ಎಂಬ ಪ್ರಶ್ನೆಯ ಸುತ್ತ ಚರ್ಚೆಗಳು ಇತ್ತೀಚೆಗೆ ಕಾವು ಪಡೆದುಕೊಂಡಿವೆ. ಪರಿಣಾಮ, ಸಾಮಾನ್ಯ ಜನರೂ ಕೂಡ ಆರ್‌ಎಸ್‌ಎಸ್‌ ಭಾರತೀಯ ಕಾನೂನಿನಡಿ ನೋಂದಣಿ ಏಕೆ ಮಾಡಿಕೊಂಡಿಲ್ಲ ಎಂಬ ಪ್ರಶ್ನೆ ಕೇಳಲು ಶುರು ಮಾಡಿದ್ದಾರೆ.

ಇದರಿಂದ ಆರ್‌ಎಸ್‌ಎಸ್‌ ದೇಶದ ಜನತೆಗೆ ಉತ್ತರ ಕೊಡಲೇಬೇಕಾದ ಇಕ್ಕಟ್ಟಿಗೆ ಸಿಲುಕಿದಂತಿದೆ. ಏಕೆಂದರೆ, ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್‌ 100ನೇ ವರ್ಷಾಚರಣೆ ಸಂಬಂಧಿತ ಕಾರ್ಯಕ್ರಮದಲ್ಲಿ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ನಗರ ಪಿಇಎಸ್‌ ವಿಶ್ವವಿದ್ಯಾಲಯದ ಸಂಭಾಗಣದಲ್ಲಿ ಭಾನುವಾರ (ನ.10) ಆಯೋಜಿಸಿದ್ದ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್ ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಳ್ಳದ್ದನ್ನು ಸಮರ್ಥಿಸಿಕೊಂಡಿದ್ದಾರೆ.

“ನಮ್ಮದು ಕಾನೂನುಬದ್ಧವಾಗಿ ಗುರುತಿಸಲ್ಪಟ್ಟ ‘ವ್ಯಕ್ತಿಗಳ ಸಂಸ್ಥೆ’. ಆದ್ದರಿಂದ ಭಾರತೀಯ ಕಾನೂನಿನಡಿಯಲ್ಲಿ ನೋಂದಣಿ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಸಂಘ 1925ರಲ್ಲಿ ಪ್ರಾರಂಭಗೊಂಡ ಸಂಸ್ಥೆ ಎಂಬುವುದು ನಿಮಗೆ ಗೊತ್ತಾ? ಆಗ ಬ್ರಿಟಿಷ್ ಸರ್ಕಾರದ ವಿರುದ್ದ ಹೋರಾಡುತ್ತಿದ್ದ ನಮ್ಮ ಸರಸಂಘ ಚಾಲಕ (ಕೆ.ಬಿ ಹೆಡ್ಗೇವಾರ್ ) ಅವರು ಬ್ರಿಟಿಷ್ ಸರ್ಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯದ ನಂತರ, ಭಾರತೀಯ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಿಲ್ಲ. ನೋಂದಣಿಯಾಗದ ವ್ಯಕ್ತಿಗಳ ಸಮೂಹಕ್ಕೂ (body of individuals) ಕಾನೂನು ಸ್ಥಾನಮಾನ ದೊರೆಯುತ್ತದೆ. ನಾವು ‘ವ್ಯಕ್ತಿಗಳ ಸಮೂಹ’ ಎಂದು ವರ್ಗೀಕೃತರಾಗಿದ್ದೇವೆ. ನಾವು ಗುರುತಿಸಲ್ಪಟ್ಟ ಸಂಸ್ಥೆಯಾಗಿದ್ದೇವೆ” ಎಂದಿದ್ದಾರೆ.

ಆರ್‌ಎಸ್‌ಎಸ್‌ನ ಕಾನೂನುಬದ್ಧ ಸ್ಥಾನಮಾನವನ್ನು ಒತ್ತಿ ಹೇಳಲು ಹಿಂದಿನ ಕಾನೂನು ವಿವಾದವನ್ನು ಉಲ್ಲೇಖಿಸಿದ ಭಾಗವತ್, “ಆದಾಯ ತೆರಿಗೆ ಇಲಾಖೆ ತೆರಿಗೆ ವಿಧಿಸಲು ಪ್ರಯತ್ನಿಸಿದಾಗ ನ್ಯಾಯಾಲಯಗಳು ‘ವ್ಯಕ್ತಿಗಳ ಸಂಸ್ಥೆ’ಯಾಗಿ ಸಂಘದ ಸ್ಥಾನವನ್ನು ಎತ್ತಿಹಿಡಿದು, ಅದರ ಗುರುದಕ್ಷಿಣೆ (ವಿದ್ಯಾರ್ಥಿಯಿಂದ ಶಿಕ್ಷಕರಿಗೆ ಸ್ವಯಂಪ್ರೇರಿತ ಕೊಡುಗೆ) ತೆರಿಗೆಯಿಂದ ವಿನಾಯಿತಿ ಪಡೆದಿದೆ ಎಂದು ತೀರ್ಪು ನೀಡಿತ್ತು” ಎಂದು ಹೇಳಿದ್ದಾರೆ.

ಸರ್ಕಾರವು ಸಂಘವನ್ನು ಗುರುತಿಸಿರುವುದಕ್ಕೆ ಪುರಾವೆಯಾಗಿ ಈ ಹಿಂದೆ ಹಲವು ಬಾರಿ ಸಂಘ ನಿಷೇಧಕ್ಕೊಳಗಾಗಿರುವುದನ್ನು ಭಾಗವತ್ ಪ್ರಸ್ತಾಪಿಸಿದ್ದು, “ನಮ್ಮನ್ನು ಮೂರು ಬಾರಿ ನಿಷೇಧಿಸಲಾಗಿತ್ತು. ಹಾಗಾಗಿ, ನಮ್ಮ ಸಂಘಟನೆಯನ್ನು ಸರ್ಕಾರ ಗುರುತಿಸಿದೆ ಎಂದಾಯಿತಲ್ಲವೇ? ಇಲ್ಲದಿದ್ದರೆ, ಅವರು ಯಾರನ್ನು ನಿಷೇಧಿಸುತ್ತಿದ್ದರು? ಪ್ರತಿ ಬಾರಿಯೂ ನ್ಯಾಯಾಲಯಗಳು ನಿಷೇಧವನ್ನು ವಜಾಗೊಳಿಸಿ ಆರ್‌ಎಸ್‌ಎಸ್ ಅನ್ನು ಕಾನೂನುಬದ್ಧ ಸಂಘಟನೆಯನ್ನಾಗಿ ಮಾಡಿವೆ” ಎಂದಿದ್ದಾರೆ.

ಸಂಘದ ಸಾಂವಿಧಾನಿಕ ನ್ಯಾಯಸಮ್ಮತತೆಯನ್ನು ಸಮರ್ಥಿಸಿದ ಭಾಗವತ್, “ನಾವು ಸಂವಿಧಾನಬಾಹಿರರಲ್ಲ. ನಮ್ಮ ಕಾನೂನು ಸ್ಥಾನಮಾನ ಸಂವಿಧಾನದೊಳಗೆ ಇದೆ. ಆದ್ದರಿಂದ ನಾವು ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ. ಅನೇಕ ವಿಷಯಗಳನ್ನು ನೋಂದಾಯಿಸಲಾಗಿಲ್ಲ, ಹಿಂದೂ ಧರ್ಮವನ್ನೂ ಕೂಡ ನೋಂದಾಯಿಸಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಭಾಗವತ್ ಅವರು ಆರ್‌ಎಸ್‌ಎಸ್‌ನ ನೋಂದಣಿ, ಭಾರತೀಯ ಸಂವಿಧಾನ ಮತ್ತು ಅದರಡಿಯ ಕಾನೂನುಗಳನ್ನು ಸಂಘ ಅನುಸರಿಸುವ ಬಗೆ, ಭಾರತದ ತ್ರಿವರ್ಣ ಧ್ವಜ ಮತ್ತು ಆರ್‌ಎಸ್‌ಎಸ್‌ನ ಭಗವಾಧ್ವಜ, ಆರ್‌ಎಸ್‌ಎಸ್‌ನ ಹಣದ ಮೂಲ ಇತ್ಯಾದಿಗಳ ಬಗ್ಗೆ ಇಷ್ಟೊಂದು ಬಹಿರಂಗವಾಗಿ ಮಾತನಾಡಿರುವುದು ಇದೇ ಮೊದಲು ಎನ್ನಬಹುದು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಕೇಳಿದ ಪ್ರಶ್ನೆಗಳು, ಅದಕ್ಕೆ ವ್ಯಕ್ತವಾದ ಪರ-ವಿರೋಧ ಅಭಿಪ್ರಾಯಗಳು ಭಾಗವತ್ ಹೇಳಿರುವ ವಿಷಯಗಳ ಕುರಿತು ಜನರಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಆರ್‌ಎಸ್‌ಎಸ್‌ ಭಾರತದ ಸಂವಿಧಾನದಡಿಯ ಕಾನೂನ ಅನ್ವಯ ನೋಂದಣಿಯಾಗದ ಸಂಘಟನೆ, ಅದು ಇನ್ನೂ ಏಕೆ ನೋಂದಣಿ ಮಾಡಿಕೊಂಡಿಲ್ಲ? ಸಂಘದ ಹಣದ ಮೂಲ ಯಾವುದು? ಇತ್ಯಾದಿ ಪ್ರಶ್ನೆಗಳನ್ನು ಪ್ರಿಯಾಂಕ್ ಖರ್ಗೆ ಸರಣಿಯಾಗಿ ಕೇಳಿದ್ದರು. ಇದು ಜನರಲ್ಲಿ ಚರ್ಚೆ ಹಚ್ಚಿ ಭಾಗವತ್ ಉತ್ತರ ಕೊಡುವಂತೆ ಮಾಡಿದೆ.

ಭಾಗವತ್ ನೀಡಿರುವ ಉತ್ತರಗಳ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ಭಾರತದಲ್ಲಿ ಪ್ರತಿಯೊಂದು ಧಾರ್ಮಿಕ ಅಥವಾ ದತ್ತಿ ಸಂಸ್ಥೆಗಳೂ ಹಣಕಾಸು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕಿರುವಾಗ, ಆರ್‌ಎಸ್‌ಎಸ್‌ಗೆ ಇದೇ ರೀತಿಯ ಜವಾಬ್ದಾರಿ ವ್ಯವಸ್ಥೆಗಳು ಇಲ್ಲದಿರುವುದನ್ನು ಏನು ಸಮರ್ಥಿಸುತ್ತದೆ? ಇದಲ್ಲದೆ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಯಾರು? ಅವರ ಸಂಖ್ಯೆ ಎಷ್ಟು? ಅವರನ್ನು ಹೇಗೆ ಗುರುತಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ಗೆ ನೀಡಲಾಗುವ ದೇಣಿಗೆಗಳ ಪ್ರಮಾಣ ಮತ್ತು ಸ್ವರೂಪ ಏನು? ಈ ಕೊಡುಗೆಗಳನ್ನು ಯಾವ ಕಾರ್ಯವಿಧಾನಗಳು ಅಥವಾ ಮಾರ್ಗಗಳ ಮೂಲಕ ಸ್ವೀಕರಿಸಲಾಗುತ್ತದೆ? ಆರ್‌ಎಸ್‌ಎಸ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತನ್ನದೇ ಆದ ನೋಂದಾಯಿತ ಗುರುತಿನ ಅಡಿಯಲ್ಲಿ ಸಂಸ್ಥೆಗೆ ನೇರವಾಗಿ ದೇಣಿಗೆಗಳನ್ನು ಏಕೆ ನೀಡಲಾಗುವುದಿಲ್ಲ?” ಎಂದು ಕೇಳಿದ್ದಾರೆ.

“ನೋಂದಾಯಿತ ಸಂಸ್ಥೆಯಲ್ಲದ ಆರ್‌ಎಸ್‌ಎಸ್ ತನ್ನ ಆರ್ಥಿಕ ಮತ್ತು ಸಾಂಸ್ಥಿಕ ರಚನೆಯನ್ನು ಹೇಗೆ ಉಳಿಸಿಕೊಳ್ಳುತ್ತದೆ?”

“ಪೂರ್ಣ ಸಮಯದ ಪ್ರಚಾರಕರಿಗೆ ಯಾರು ಸಹಾಯ ನೀಡುತ್ತಾರೆ ಮತ್ತು ಸಂಸ್ಥೆಯ ದಿನನಿತ್ಯದ ಕಾರ್ಯಾಚರಣೆಯ ವೆಚ್ಚಗಳನ್ನು ಪೂರೈಸುತ್ತಾರೆ? ದೊಡ್ಡ ಪ್ರಮಾಣದ ಕಾರ್ಯಕ್ರಮಗಳು, ಅಭಿಯಾನಗಳು ಮತ್ತು ಪ್ರಚಾರ ಚಟುವಟಿಕೆಗಳಿಗೆ ಹೇಗೆ ಹಣಕಾಸು ಒದಗಿಸಲಾಗುತ್ತದೆ? ಸ್ವಯಂಸೇವಕರು ಸ್ಥಳೀಯ ಕಚೇರಿಗಳಿಂದ ಸಮವಸ್ತ್ರ ಅಥವಾ ವಸ್ತುಗಳನ್ನು ಖರೀದಿಸಿದಾಗ, ಈ ಹಣವನ್ನು ಎಲ್ಲಿಗೆ ಲೆಕ್ಕ ಹಾಕಲಾಗುತ್ತದೆ? ಸ್ಥಳೀಯ ಕಚೇರಿಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ವಹಿಸುವ ವೆಚ್ಚವನ್ನು ಯಾರು ಭರಿಸುತ್ತಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಹಾಕಿದ್ದಾರೆ.

ಈ ಪ್ರಶ್ನೆಗಳು ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಮೂಲಭೂತ ಸಮಸ್ಯೆಯನ್ನು ಒತ್ತಿಹೇಳುತ್ತವೆ ಎಂದಿರುವ ಪ್ರಿಯಾಂಕ್ ಖರ್ಗೆ, “ರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾದ ಉಪಸ್ಥಿತಿ ಮತ್ತು ಪ್ರಭಾವದ ಹೊರತಾಗಿಯೂ ಆರ್‌ಎಸ್‌ಎಸ್ ಏಕೆ ನೋಂದಾಯಿಸದೆ ಉಳಿದಿದೆ?” ಎಂದು ಕೇಳಿದ್ದಾರೆ.

“ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿ 100 ವರ್ಷಗಳು, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳು, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು, ರಾಷ್ಟ್ರ-ವಿರೋಧಿಯಾಗಿ 100 ವರ್ಷಗಳು” ಎಂದು ಬರೆದುಕೊಳ್ಳುವ ಮೂಲಕ ಆರ್‌ಎಸ್‌ಎಸ್‌ನ 100ನೇ ವರ್ಷಾಚರಣೆಗೆ ಖರ್ಗೆ ತಿರುಗೇಟು ಕೊಟ್ಟಿದ್ದಾರೆ.

“ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಫೆಬ್ರವರಿ 24, 1948 ರಂದು ಬರೆದ ಪತ್ರ ಇಲ್ಲಿದೆ. ಇದರಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿದೆ ಎಂಬುದನ್ನು ದಾಖಲಿಸಲಾಗಿದೆ. ಇತಿಹಾಸವು ನಮ್ಮ ದೇಶಕ್ಕೆ ಆರ್‌ಎಸ್‌ಎಸ್ ಮಾಡಿದ ನಿರ್ಲಜ್ಜ ದ್ರೋಹದ ನಿದರ್ಶನಗಳಿಂದ ತುಂಬಿದೆ. ಮತ್ತು ಇಡೀ ಬಿಜೆಪಿ ಇಕೋ ಸಿಸ್ಟಂ ಎಷ್ಟೇ ಪ್ರಯತ್ನಿಸಿದರೂ, ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎಂಬ ಇತಿಹಾಸವನ್ನು ಅಳಿಸಿಹಾಕಲು ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಚರಿತ್ರೆಯನ್ನು ತಿಳಿದುಕೊಳ್ಳುವ ಸಮಯ ಬಂದಿದೆ” ಎಂದು ಬರೆದುಕೊಂಡು ದಾಖಲೆ ಹಂಚಿಕೊಂಡಿದ್ದಾರೆ.

ಮುಸ್ಲಿಮ್‌-ದಲಿತ ಕ್ರೈಸ್ತರಿಗೆ ಎಸ್‌ಸಿ ಸ್ಥಾನಮಾನ; ಪರಿಶೀಲನಾ ಸಮಿತಿ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...