Homeಕರ್ನಾಟಕಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಸಂಘ ಪರಿವಾರ ಇಬ್ಬಂದಿ ನೀತಿ ಅನುಸರಿಸುತ್ತಿದೆ ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...