Homeಕರ್ನಾಟಕಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಸಂಘ ಪರಿವಾರ ಇಬ್ಬಂದಿ ನೀತಿ ಅನುಸರಿಸುತ್ತಿದೆ ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...