Homeಕರ್ನಾಟಕಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಸಂಘ ಪರಿವಾರ ಇಬ್ಬಂದಿ ನೀತಿ ಅನುಸರಿಸುತ್ತಿದೆ ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...