Homeಕರ್ನಾಟಕಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಸಂಘ ಪರಿವಾರ ಇಬ್ಬಂದಿ ನೀತಿ ಅನುಸರಿಸುತ್ತಿದೆ ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...