Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...