Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...