Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...