Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...