Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...