Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...