Homeಮುಖಪುಟಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಶಿವಸೇನೆ ನಡುವಿನ ವಿವಾದದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ತಟಸ್ಥ ನಿಲುವು ತಳೆದಿದ್ದಾರೆ. ಆದರೂ ಸೋನಿಯಾ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ನಿಮ್ಮ ಸರ್ಕಾರ ನನಗೆ ಕಿರುಕುಳ ನೀಡುತ್ತಿದ್ದರೂ, ಈ ಬಗ್ಗೆ ನಿಮಗೆ ಸಂಕಟವಾಗುತ್ತಿಲ್ಲವೇ ?‘ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ನಟಿ ಕಂಗನಾ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಟ್ವೀಟ್ ಮಾಡಿದ್ದರು.

ಶಿವಸೇನಾ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ಬಿಎಂಸಿ ಆಕೆಯ ಮಣಿಕರ್ಣಿಕಾ ಫಿಲ್ಮಂ ಕಚೇರಿಯಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಈ ಪ್ರಕರಣ ಈ ಬಾಂಬೆ ಹೈಕೋಟ್‌ನಲ್ಲಿದ್ದು, ವಿಚಾರಣೆ ಸೆ.22ಕ್ಕೆ ನಡೆಯಲಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಈ ನಡುವೆ ವಿವಾದದಲ್ಲಿ ಕೇಂದ್ರ ಕಾಂಗ್ರೆಸ್ ವಲಯ ಯಾವುದೇ ಹೇಳಿಕೆ ನೀಡದೆ ತಟಸ್ಥವಾಗಿತ್ತು. ನಾವು ಗಮನಹರಿಸಬೇಕಾದ ಇದಕ್ಕಿಂತ ಮುಖ್ಯ ವಿಷಯಗಳಿವೆ ಎಂದು ಘಟನೆಯಿಂದ ದೂರ ಉಳಿಯುವ ಪ್ರಯತ್ನ ನಡೆಸಿತ್ತು. ಆದರೆ ನಟಿ ಕಂಗನಾ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ವಿವಾದದಲ್ಲಿ ಎಳೆತಂದಿದ್ದು, ಅವರ ವಿರುದ್ಧ ಪ್ರಶ್ನೆಗಳ ಸುರಿಮಳೆ ಸುರಿದು, ವಾಗ್ದಾಳಿ ನಡೆಸಿದ್ದಾರೆ.

‘ಗೌರವಾನ್ವಿತ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರೇ, ಒಬ್ಬ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಮಹಾರಾಷ್ಟ್ರ ಸರ್ಕಾರ ನನಗೆ ಕಿರುಕುಳ ನೀಡುತ್ತಿರುವುದು ನಿಮಗೆ ಸಂಕಟ ತರುತ್ತಿಲ್ಲವೇ?  ಡಾ. ಅಂಬೇಡ್ಕರ್‌ ಅವರು ನಮಗೆ ನೀಡಿರುವ ಸಂವಿಧಾನದ ತತ್ವಗಳನ್ನು ಎತ್ತಿ ಹಿಡಿಯುವಂತೆ ಆ ನಿಮ್ಮ ಸರ್ಕಾರಕ್ಕೆ ಮನವಿ ಮಾಡಲು ಸಾಧ್ಯವಿಲ್ಲವೇ?‘ ಎಂದು ಕಂಗನಾ ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ನಟಿ ಇನ್ನೊಂದು ಟ್ವೀಟ್‌ನಲ್ಲಿ, ನೀವು ಪಾಶ್ಚಿಮಾತ್ಯ ದೇಶದಲ್ಲಿ ಬೆಳೆದವರು, ಈಗ ಭಾರತದಲ್ಲಿ ನೆಲೆಸಿದ್ದೀರಿ. ಮಹಿಳೆಯರ ಸಂಕಷ್ಟಗಳ ಬಗ್ಗೆ ನಿಮಗೆ ಅರಿವಿರಬಹುದು. ನಿಮ್ಮ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿರುವಾಗ ನೀವು ಮೌನ ವಹಿಸಿರುವುದು ಹಾಗೂ ನಿರ್ಲಕ್ಷ್ಯ ತೋರುತ್ತಿರುವುದನ್ನ ಇತಿಹಾಸವೇ ನಿರ್ಣಯಿಸುತ್ತದೆ ಎಂದು ಕಟುವಾದ ಸಾಲುಗಳನ್ನು ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ನಟಿಯ ಅಸಮಾಧಾನ, ಆಕ್ರೋಶ ನಿಜವಿರಬಹುದು, ಆಕೆಗೆ ಅನ್ಯಾಯವಾಗಿದ್ದರೆ ಅದನ್ನು ಪ್ರಶ್ನಿಸುವುದು, ಹೋರಾಡುವುದು ಆಕೆಯ ಹಕ್ಕು. ಹಾಗೆಂದ ಮಾತ್ರಕ್ಕೆ ಅದಕ್ಕೆ ಸಂಬಂಧವೇ ಇಲ್ಲದ ಮತ್ತೊಬ್ಬ ಮಹಿಳೆಯನ್ನೇ ಅವರು ಟಾರ್ಗೆಟ್ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರಸ್ ಪಕ್ಷ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ನಿಮ್ಮ ಮುಂಬೈ ಪೊಲೀಸರ ಮತ್ತು ಮಹಾರಾಷ್ಟ್ರದ ಬಗೆಗಿನ ಹೇಳಿಕೆಗಳನ್ನು ಅವರು ಸಮರ್ಥಿಸಿಕೊಳ್ಳಬೇಕೆ?

ಹೌದು, ಈ ದೇಶದಲ್ಲಿ ಅತಿ ಹೆಚ್ಚು ಅವಮಾನ, ಅಪಹಾಸ್ಯ, ಟೀಕೆಗಳು, ಕೀಳುಮಟ್ಟದ ಕಾಮೆಂಟ್‌ಗಳು, ಕೆಟ್ಟ ಮೀಮ್ಸ್‌ಗಳಿಗೆ ಗುರಿಯಾದ ಏಕೈಕ ಮಹಿಳೆ ಸೋನಿಯಾ ಗಾಂಧಿ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಆಕೆಯ ಬಗ್ಗೆ, ಆಕೆಯ ದೇಶಾಭಿಮಾನ, ಆಕೆಯ ಪೌರತ್ವದ ಬಗ್ಗೆ, ವಿದೇಶಿ ಮಹಿಳೆ ಎಂಬ ಬಗ್ಗೆ ಸಂಘಪರಿವಾರ, ವಿಶ್ವ ಹಿಂದೂ ಪರಿಷತ್‌ನಂತಹ ಸಂಘಟನೆಗಳು, ಭಾರತೀಯ ಜನತಾ ಪಾರ್ಟಿಯಂತಹ ಪಕ್ಷಗಳು ಅಪಹಾಸ್ಯ ಮಾಡಿವೆ ಮತ್ತು ಮಾಡುತ್ತಲೇ ಇವೆ.

ರಾಜಕೀಯದಲ್ಲಿ ಎಲ್ಲಾ ಪಕ್ಷಗಳಲ್ಲೂ ಮಹಿಳೆಯರಿದ್ದಾರೆ. ಇಷ್ಟು ದಿನಗಳ ಕಾಲ ಯಾವ ಮಹಿಳೆಯ ಹೆಸರನ್ನೂ ಉಲ್ಲೇಖಿಸದ ಕಂಗನಾ ಇಂದು ಸೋನಿಯಾ ಗಾಂಧಿ ಒಬ್ಬರನ್ನೇ ಎಳೆದುತಂದಿದ್ದೇಕೆ..? ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ. ಇವುಗಳನ್ನು ನೋಡಿದಾಗ ಸೋನಿಯಾ ಗಾಂಧಿ ಹೆಸರು ತರುವ ಹಿಂದೆ ಹುನ್ನಾರವಿದೆ ಎನ್ನಿಸುವುದಿಲ್ಲವೆ..?

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಾಣಾವತ್‌ಗೊಂದು ಪತ್ರ

ಕಂಗನಾ ಕೂಡ ತಮ್ಮ ನೋವಿಗೆ ದನಿಯಾಗಿ ಎಂದು ಕೇಳಿಲ್ಲ. ಆಕೆ ಕೂಡ ಸೋನಿಯಾ ಗಾಂಧಿಯನ್ನು ಅವಮಾನಿಸಿಯೇ ಟ್ವೀಟ್ ಮಾಡಿರುವು ಕಾಣುತ್ತದೆ. ಪಾಶ್ಚಿಮಾತ್ಯ ದೇಶದವರು, ಇಲ್ಲಿನ ಮಹಿಳೆಯರ ಸಂಕಷ್ಟಗಳ ಅರಿವಿರಲಿ ಎನ್ನುವ ನಟಿಗೆ ಸೋನಿಯಾ ಗಾಂಧಿ ಭಾರತದ ಪ್ರಜೆಯಾಗಿದ್ದಾಗ ಈಕೆ ಇನ್ನೂ ಹುಟ್ಟಿರಲಿಲ್ಲ ಎನ್ನುವ ಅರಿವಿರದೇ ಹೋಗಿದ್ದು ವಿಷಾದ.

ಇನ್ನು ಇದೇ ಸಂದರ್ಭದಲ್ಲಿ ಕಂಗನಾರವರ ತಾಯಿ ಬಿಜೆಪಿ ಪಕ್ಷ ಸೇರುತ್ತಿರುವುದು, ಮಹರಾಷ್ಟ್ರದ ವಿರುದ್ಧ ಹೇಳಿಕೆ ನೀಡಿದರೂ ಸಹ ಬಿಜೆಪಿ ಕಂಗನಾ ಪರ ನಿಂತಿರುವುದಕ್ಕೂ, ಕಂಗನಾ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಮಾತಾಡುತ್ತಿರುವುದಕ್ಕೂ ಸಂಬಂಧವಿಲ್ಲವೇ ಎಂಬ ಪ್ರಶ್ನೆ ಸಹ ಜೋರಾಗಿ ಕೇಳಿಬಂದಿದೆ.

ಇನ್ನು ಡ್ರಗ್ಸ್ ವಿಚಾರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಹೆಚ್ಚಾಗಿ ನಟಿಯರನ್ನೇ ಬಂಧಿಸಲಾಗುತ್ತಿದೆ. ಏಕೆ ನಟರು ಯಾರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವೇ? ಈ ಬಗ್ಗೆ ಕಂಗನಾ ಏಕೆ ದನಿಯೆತ್ತುತ್ತಿಲ್ಲ ಎಂದರೆ ಅದಕ್ಕೆ ಅವರು ಯಾವ ಉತ್ತರ ಕೊಡುತ್ತಾರೆ?

ಪ್ರತಿ ವ್ಯಕ್ತಿಯ ಮೌನಕ್ಕೆ ಕಾಲವೇ ಉತ್ತರ ನೀಡುತ್ತದೆ ಎನ್ನುವುದಕ್ಕೆ ಸೋನಿಯಾ ಗಾಂಧಿ ನಿದರ್ಶನ. ತಮ್ಮ ಬಗ್ಗೆ ಬರುವ ಟೀಕೆಗಳಿಗೆ ಆಕೆ ಉತ್ತರಿಸಿದ್ದು ಕಡಿಮೆಯೇ. ಬೇರೆಯವರ ಪೊಳ್ಳು ಮಾತುಗಳಿಗೆ, ವಿವಾದಗಳಿಗೆ ಪ್ರಾಮುಖ್ಯತೆ ನೀಡದೇ ತಮ್ಮ ಕೆಲಸದ ಕಡೆಯಷ್ಟೇ ಗಮನ ಕೊಡುತ್ತಾ ಸಾಗಿದ್ದಾರೆ.


ಇದನ್ನೂ ಓದಿ; ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....