Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....