Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...