Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...