Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...