Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...