Homeಮುಖಪುಟಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

’ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬರುತ್ತವೆ ಆದರೆ ಗುಜರಾತ್‌ನಲ್ಲಿ ಕೇವಲ ಒಂದು ಪಕ್ಷ ಮಾತ್ರ ಆಡಳಿತ ನಡೆಸುತ್ತಿದೆ’ - ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಗುಜರಾತ್‌ನ ಸೂರತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೊದಲ ಬಾರಿಯೇ ಆಪ್ 27 ಸ್ಥಾನಗಳಲ್ಲಿ ಜಯಗಳಿಸಿದೆ. ಈ ಹಿನ್ನೆಲೆ ಇಂದು (ಫೆ.26) ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಸೂರತ್‌ಗೆ ಭೇಟಿ ನೀಡಿ ಆಯ್ಕೆಯಾಗಿರುವ ಹೊಸ ಕಾರ್ಪೊರೇಟರ್‍ಸ್ ಮತ್ತು ಕಾರ್ಯಕರ್ತರನ್ನು ಅಭಿನಂದಿಸಿದರು.

ಗುಜರಾತ್‌ನ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 483 ಸ್ಥಾನಗಳಿಸಿದೆ. ಕಾಂಗ್ರೆಸ್ ಕೇವಲ 55 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆದರೆ ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಭರ್ಜರಿ ಆರಂಭ ಮಾಡಿದೆ. ಸೂರತ್‌ ಮಹಾನಗರ ಪಾಲಿಕೆಯ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಶುಕ್ರವಾರ ಸೂರತ್‌ಗೆ ಭೇಟಿ ನೀಡಿರುವ ಆಪ್ ಮುಖಂಡ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷದ ನೂತನ ಕಾರ್ಪೋರೇಟರ್‍ಸ್ ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.  ’ಕಳೆದ ಕೆಲವು ದಿನಗಳಿಂದ ನಾನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹೇಳಿಕೆಗಳನ್ನು ಕೇಳುತ್ತಿದ್ದೇನೆ. ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶಗಳ ನಂತರ ಅವರು ಗೊಂದಲಕ್ಕೊಳಗಾಗಿದ್ದಾರೆ, ಸ್ವಲ್ಪ ಹೆದರಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

’ಈ ಪಕ್ಷಗಳು ನಿಮಗೆ( ಕಾರ್ಪೊರೇಟರ್‍ಸ್) ಅಥವಾ ಎಎಪಿಗೆ ಹೆದರುವುದಿಲ್ಲ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ, ನಿಮಗಾಗಿ ಮತ ಚಲಾಯಿಸಿದ ಜನರಿಂದ ಅವರು ಭಯಭೀತರಾಗಿದ್ದಾರೆ’ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ಮೇಲೆ ಹರಿಹಾಯ್ದಿರುವ ದೆಹಲಿ ಮುಖ್ಯಮಂತ್ರಿ, ’ಕಳೆದ 25 ವರ್ಷಗಳಿಂದ ಇಲ್ಲಿ ಬಿಜೆಪಿ ಒಂದೇ ಏಕೆ ಆಡಳಿತ ನಡೆಸುತ್ತಿದೆ..? ಎಂದು ಪ್ರಶ್ನಿಸಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಲ್ಲ, ಇಲ್ಲಿಯೂ ಬಹಳಷ್ಟು ಸಮಸ್ಯೆಗಳಿವೆ. ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬರುತ್ತವೆ ಆದರೆ ಇಲ್ಲಿ ಕೇವಲ ಒಂದು ಪಕ್ಷ ಮಾತ್ರ ಆಡಳಿತ ನಡೆಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸೂರತ್ ಸ್ಥಳೀಯ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಗಮನಾರ್ಹ ಸಾಧನೆ ಗುಜರಾತ್‌ನಲ್ಲಿನ ಹೊಸ ರಾಜಕೀಯ ಆರಂಭದ ಸೂಚನೆ ಎಂದು ಅರವಿಂದ್ ಕೇಜ್ರಿವಾಲ್ ಫಲಿತಾಂಶದ ಬಳಿಕ ತಿಳಿಸಿದ್ದರು. ಇದು ಪ್ರಾಮಾಣಿಕತೆಗೆ ಸಿಕ್ಕ ಜಯವಾಗಿದೆ’ ಎಂದಿದ್ದರು.

125 ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಜನತೆ ಆಪ್ ಕೈ ಹಿಡಿದಿದ್ದಾರೆ. ಆಪ್‌ನಿಂದ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಗುಜರಾತ್‌ನಲ್ಲಿ ಪ್ರಾಮಾಣಿಕ ರಾಜಕಾರಣ, ಉತ್ತಮ ಶಾಲೆಗಳಿಗಾಗಿ ರಾಜಕಾರಣ, ಕಡಿಮೆ ದರದಲ್ಲಿ 24 ಗಂಟೆಗಳ ವಿದ್ಯುತ್ ನೀಡುವುದು ನಮ್ಮ ಆದ್ಯತೆ. ಜನರ ಸಹಭಾಗಿತ್ವದೊಂದಿಗೆ ಗುಜರಾತ್‌ ಅನ್ನು ಅಭಿವೃದ್ದಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...