Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...