Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...