Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...