Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....