Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....