Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...