Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...