Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...