Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...