Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...