Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...