Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...