Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...