Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...