Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...