Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...