Homeಮುಖಪುಟಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

"ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ" ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.

- Advertisement -
- Advertisement -

ಚೀನಿ ಸೈನಿಕರಿಂದ ಭಾರತೀಯ ಸೇನಾ ಅಧಿಕಾರಿ ಮತ್ತು ಇಬ್ಬರು ಯೋಧರು ಹತ್ಯೆಯಾಗಿರುವ ಸನ್ನಿವೇಶವನ್ನು ದೇಶದ ಜನರ ಮುಂದೆ ಬಹಿರಂಗಪಡಿಸಬೇಕು ಮತ್ತು ಮಂಗಳವಾರ ಮಧ್ಯಾಹ್ನ ಸರ್ಕಾರ ನೀಡಿದ ಹೇಳಿಕೆಯನ್ನು ಕೇವಲ 16 ನಿಮಿಷಗಳಲ್ಲೇ ಬದಲಾಯಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಹಾಗೆಯೇ ನಮ್ಮ ಬಲಿಷ್ಠ ಸೈನಿಕರು ಹತ್ಯೆಯಾಗಿರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಮೌನ ವಹಿಸಲು ಕಾರಣವೇನು ಎಂಬುದು ಸೇರಿದಂತೆ ಈ ಕೆಳಗಿನ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದೆ.

ಗಾಲ್ವಾನ್ ಕಣಿವೆಯಲ್ಲಿ ಚೀನಿಯರು ಭಾರತೀಯ ಸೇನೆಯ ಅಧಿಕಾರಿ ಮತ್ತು ಸೈನಿಕರನ್ನು ಕೊಂದಿದ್ದಾರೆ ಎಂಬುದು ನಿಜವೇ? ಹಲವು ಭಾರತೀಯ ಸೈನಿಕರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂಬುದು ನಿಜವೇ? ಹಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೌನ ಕಾಪಾಡಿಕೊಳ್ಳುತ್ತಿರುವುದು ಏಕೆ?

ಗಾಲ್ವಾಣ್ ಕಣಿವೆಯಲ್ಲಿ ಉದ್ವಿಗ್ನ ಪ್ರಕ್ರಿಯೆ ನಡೆಯುತ್ತಿರುವುದರಿಂದ ನಿನ್ನೆ ರಾತ್ರಿ ಭಾರತೀಯ ಸೇನಾಧಿಕಾರಿ ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ವರದಿ ಸೂಚಿಸುತ್ತದೆ. ಗಾಲ್ವಾನ್ ಕಣಿವೆಯಲ್ಲಿರುವ ಚೀನಿಯರು ನಮ್ಮ ಭೂಪ್ರದೇಶದಿಂದ ಹಿಂದೆ ಸರಿಯುತ್ತಿದ್ದಾರೆಂದು ವರದಿಯಾಗಿದೆ. ಹಾಗಾದರೆ ನಮ್ಮ ಅಧಿಕಾರಿ ಮತ್ತು ಸೈನಿಕರನ್ನು ಹೇಗೆ ಕೊಲ್ಲಬಹುದು? ಈ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ? ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ನಮ್ಮ ಅಧಿಕಾರಿ ಮತ್ತು ಸೈನಿಕರು ಹುತಾತ್ಮರಾದರು?

ನಮ್ಮ ಅಧಿಕಾರಿ ಮತ್ತು ಸೈನಿಕರು ನಿನ್ನೆ ರಾತ್ರಿ ಹತ್ಯೆಯಾಗಿದ್ದರೆ ಇಂದು ಮಧ್ಯಾಹ್ನ 12.52ಕ್ಕೆ ಹೇಳಿಕೆ ಏಕೆ ನೀಡಲಾಯಿತು. ಮತ್ತು 16 ನಿಮಿಷಗಳ ನಂತರ ಅಂದರೆ 1.08ಗಂಟಗೆ ಹೇಳಿಕೆಯನ್ನು ಏಕೆ ಬದಲಾಯಿಸಲಾಯಿತು?

ಪ್ರಧಾನಿ ಮತ್ತು ರಕ್ಷಣಾ ಸಚಿವರು ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಚೀನೀಯರು ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಪದೇಪದೇ ಒಂದು ಕುತೂಹಲಕಾರಿ ಮೌನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಸಾರ್ವಜನಿಕ ವಲಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗ ಹೇಳಲು ಮುಂದೆ ಬರುತ್ತಾರೆಯೇ?

ಏಪ್ರಿಲ್ ಮತ್ತು ಮೇ 2020ರ ನಂತರ ನಮ್ಮ ಭೂಪ್ರದೇಶವನ್ನು ಅಕ್ರಮವಾಗಿ ಎಷ್ಟು ಅತಿಕ್ರಮಣ ಮಾಡಿದ್ದಾರೆ? ನಮ್ಮ ಧೈರ್ಯಶಾಲಿ ಅಧಿಕಾರಿ ಮತ್ತು ಸೈನಿಕರನ್ನು ಚೀನಿಯರು ಹತ್ಯೆಗೈಯಲು ಕಾರಣವಾದ  ಸಂದರ್ಭಗಳು ಯಾವುವು? ಚೀನಿಯರನ್ನು ಬಲವಂತವಾಗಿ ಒತ್ತಾಯಿಸುವ ಬದಲು ವಾಸ್ತವ ನಿಯಂತ್ರಣ ರೇಖೆಯಲ್ಲಿ ಅವರ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಲು ಪ್ರಧಾನಿ ಮುಂದೆ ಬಂದು ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆಯೇ?

ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಗಂಭೀರವಾದ ಬದಲಾವಣೆಗಳನ್ನು ಹೊಂದಿರುವ ಈ ಸವಾಲಿನ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹೇಗೆ ಪ್ರಸ್ತಾಪಿಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶಕ್ಕೆ ತಿಳಿಸುವರೇ?

ಇತ್ಯಾದಿ ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದೆ. ಅಲ್ಲದೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ರಾಹುಲ್‌ ಗಾಂಧಿ ಬರೆದಿದ್ದಾರೆ.


ಇದನ್ನೂ ಓದಿ: ಪ್ರಧಾನ ಮಂತ್ರಿಗಳೇ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುವುದನ್ನು ದೇಶಕ್ಕೆ ತಿಳಿಸಿ: ಹೆಚ್‌. ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...