Homeಮುಖಪುಟಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಇದಾದ ನಂತರ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದನು. ಯುವತಿ ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದನು. ಆದರೆ 5 ದಿನದ ನಂತರ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.

ಪುಲ್ಕಿತ್ ಆರ್ಯ ತನ್ನ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ. ಈಗ ರೆಸಾರ್ಟ್ ಮೇಲೆ ಬುಲ್ಡೋಜರ್‌ ಹತ್ತಿಸಿ ಸಾಕ್ಷಿ ನಾಶಕ್ಕೆ ಸರ್ಕಾರ ಅವಕಾಶ ನೀಡಿದೆ ಎಂಬ ಆರೋಪವನ್ನು ಯುವತಿಯ ಕುಟುಂಬ ಆರೋಪಿಸಿದೆ. ಈ ರೆಸಾರ್ಟ್‌ನಲ್ಲಿ ಕಾನೂನು ಬಾಹಿರ ಕೃತ್ಯಗಳು ನಡೆದಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯಾದ ಯುವತಿಯ ಅಂತ್ಯಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ. ಸ್ಥಳೀಯರು ಹಾಗೂ ಯುವತಿಯ ಸಂಬಂಧಿಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಯುವತಿಯು ಕೆಲಸ ಮಾಡುತ್ತಿದ್ದ ರೆಸಾರ್ಟ್ ಅನ್ನು ಕೆಡವಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ಪ್ರಶ್ನಿಸಿರುವ ಯುವತಿಯ ಕುಟುಂಬ, “ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಪ್ರಮುಖ ಆರೋಪಿಯಾಗಿರುವ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಲು ಈ ಕ್ರಮ ಜರುಗಿಸಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಅಂತಿಮ ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ಶವವನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದೂ ಕುಟುಂಬ ಹೇಳಿದೆ. ಯುವತಿಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳಿವೆ ಎಂದು ತಾತ್ಕಾಲಿಕ ವರದಿ ಹೇಳಿದೆ. ಪೊಲೀಸರ ಹೇಳಿಕೆಗಳನ್ನು ಕುಟುಂಬ ನಿರಾಕರಿಸಿದೆ. ಯುವತಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಇಂದು ಶ್ರೀನಗರ-ಕೇದಾರನಾಥ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ ನಡೆದ ಬುಲ್ಡೋಜರ್‌ ಕಾರ್ಯಚರಣೆ ಕುರಿತು ಪ್ರತಿಪಕ್ಷವೂ ಪ್ರಶ್ನೆಗಳನ್ನು ಎತ್ತಿದೆ. “ಇದೊಂದು ಯೋಜಿತ ಕೊಲೆಯಾಗಿದೆ. ಸಾಕ್ಷ್ಯ ನಾಶಪಡಿಸಲು ರೆಸಾರ್ಟ್ ನೆಲಸಮ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜನರು ಶಂಕಿಸಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಆರೋಪಿಗಳಿಗೆ ಆಡಳಿತ ಪಕ್ಷದೊಂದಿಗೆ ನಂಟು ಇರುವುದರಿಂದ ಪೊಲೀಸರ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಎಫ್‌ಐಆರ್ ದಾಖಲು ಮಾಡಿಕೊಳ್ಳಲು ವಿಳಂಬ ನೀತಿ ಅನುಸರಿಸಿದ್ದನ್ನು ಪ್ರಶ್ನಿಸಿವೆ.

“ರೆಸಾರ್ಟ್ ಇರುವ ಪ್ರದೇಶ ಸಾಮಾನ್ಯವಾಗಿ ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ” ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಭೂಕಂದಾಯ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸುವ ವ್ಯವಸ್ಥೆ ನಮ್ಮಲ್ಲಿದೆ” ಎಂದು ತಮ್ಮ ವಿಳಂಬಕ್ಕೆ ಸಮರ್ಥನೆ ನೀಡಿದ್ದಾರೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. “ಇದು ಅತ್ಯಂತ ಘೋರ ಅಪರಾಧ, ಅಪರಾಧಿ ಯಾರೇ ಆಗಿದ್ದರೂ ಬಿಡುವುದಿಲ್ಲ” ಎಂದಿದ್ದಾರೆ.

ಆರೋಪಿಯ ತಂದೆ, ಸಚಿವ ದರ್ಜೆಯ ರಾಜ್ಯ ಮಂಡಳಿಯ ಮಾಜಿ ಅಧ್ಯಕ್ಷ ವಿನೋದ್ ಆರ್ಯ ಮತ್ತು ಆತನ ಸಹೋದರ, ಬಿಜೆಪಿ ಪದಾಧಿಕಾರಿ ಅಂಕಿತ್ ಆರ್ಯ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಪುಲ್ಕಿತ್ ಆರ್ಯ ಅಲ್ಲದೆ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆಯಲಾಗಿದ್ದು, ಯುವತಿಯು ಕೊನೆಯದಾಗಿ ಮೂವರು ವ್ಯಕ್ತಿಗಳೊಂದಿಗೆ ಇರುವುದು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಶ್ಯಾವಾಟಿಕೆಗೆ ಒತ್ತಾಯ: ಯುವತಿಯ ವಾಟ್ಸಾಪ್‌ ಚಾಟ್‌ ಬಹಿರಂಗ

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳುತ್ತಿವೆ. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿವೆ.

ಯುವತಿಯು ಕಳುಹಿಸಿರುವ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹರಿದಾಡುತ್ತಿದೆ. ಅದರಲ್ಲಿ ಅವರು, ರೆಸಾರ್ಟ್‌ಗೆ ಆಗಮಿಸುತ್ತಿದ್ದ ಗ್ರಾಹಕರಿಗೆ 10 ಸಾವಿರ ರೂ.ಗೆ ‘ವಿಶೇಷ ಸೇವೆಗಳನ್ನು’ ಒದಗಿಸಲು ಹೇಗೆ ಒತ್ತಾಯಿಸಲಾಯಿತು ಎಂಬುದನ್ನು ವಿವರಿಸಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಗಳು ಈ ಸಂದೇಶಗಳು ಕೊಲೆಗೀಡಾದ ಯುವತಿಯದ್ದೆ ಎಂದು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ, ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...