Homeಮುಖಪುಟಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಇದಾದ ನಂತರ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದನು. ಯುವತಿ ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದನು. ಆದರೆ 5 ದಿನದ ನಂತರ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.

ಪುಲ್ಕಿತ್ ಆರ್ಯ ತನ್ನ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ. ಈಗ ರೆಸಾರ್ಟ್ ಮೇಲೆ ಬುಲ್ಡೋಜರ್‌ ಹತ್ತಿಸಿ ಸಾಕ್ಷಿ ನಾಶಕ್ಕೆ ಸರ್ಕಾರ ಅವಕಾಶ ನೀಡಿದೆ ಎಂಬ ಆರೋಪವನ್ನು ಯುವತಿಯ ಕುಟುಂಬ ಆರೋಪಿಸಿದೆ. ಈ ರೆಸಾರ್ಟ್‌ನಲ್ಲಿ ಕಾನೂನು ಬಾಹಿರ ಕೃತ್ಯಗಳು ನಡೆದಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯಾದ ಯುವತಿಯ ಅಂತ್ಯಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ. ಸ್ಥಳೀಯರು ಹಾಗೂ ಯುವತಿಯ ಸಂಬಂಧಿಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಯುವತಿಯು ಕೆಲಸ ಮಾಡುತ್ತಿದ್ದ ರೆಸಾರ್ಟ್ ಅನ್ನು ಕೆಡವಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ಪ್ರಶ್ನಿಸಿರುವ ಯುವತಿಯ ಕುಟುಂಬ, “ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಪ್ರಮುಖ ಆರೋಪಿಯಾಗಿರುವ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಲು ಈ ಕ್ರಮ ಜರುಗಿಸಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಅಂತಿಮ ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ಶವವನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದೂ ಕುಟುಂಬ ಹೇಳಿದೆ. ಯುವತಿಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳಿವೆ ಎಂದು ತಾತ್ಕಾಲಿಕ ವರದಿ ಹೇಳಿದೆ. ಪೊಲೀಸರ ಹೇಳಿಕೆಗಳನ್ನು ಕುಟುಂಬ ನಿರಾಕರಿಸಿದೆ. ಯುವತಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಇಂದು ಶ್ರೀನಗರ-ಕೇದಾರನಾಥ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ ನಡೆದ ಬುಲ್ಡೋಜರ್‌ ಕಾರ್ಯಚರಣೆ ಕುರಿತು ಪ್ರತಿಪಕ್ಷವೂ ಪ್ರಶ್ನೆಗಳನ್ನು ಎತ್ತಿದೆ. “ಇದೊಂದು ಯೋಜಿತ ಕೊಲೆಯಾಗಿದೆ. ಸಾಕ್ಷ್ಯ ನಾಶಪಡಿಸಲು ರೆಸಾರ್ಟ್ ನೆಲಸಮ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜನರು ಶಂಕಿಸಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಆರೋಪಿಗಳಿಗೆ ಆಡಳಿತ ಪಕ್ಷದೊಂದಿಗೆ ನಂಟು ಇರುವುದರಿಂದ ಪೊಲೀಸರ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಎಫ್‌ಐಆರ್ ದಾಖಲು ಮಾಡಿಕೊಳ್ಳಲು ವಿಳಂಬ ನೀತಿ ಅನುಸರಿಸಿದ್ದನ್ನು ಪ್ರಶ್ನಿಸಿವೆ.

“ರೆಸಾರ್ಟ್ ಇರುವ ಪ್ರದೇಶ ಸಾಮಾನ್ಯವಾಗಿ ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ” ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಭೂಕಂದಾಯ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸುವ ವ್ಯವಸ್ಥೆ ನಮ್ಮಲ್ಲಿದೆ” ಎಂದು ತಮ್ಮ ವಿಳಂಬಕ್ಕೆ ಸಮರ್ಥನೆ ನೀಡಿದ್ದಾರೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. “ಇದು ಅತ್ಯಂತ ಘೋರ ಅಪರಾಧ, ಅಪರಾಧಿ ಯಾರೇ ಆಗಿದ್ದರೂ ಬಿಡುವುದಿಲ್ಲ” ಎಂದಿದ್ದಾರೆ.

ಆರೋಪಿಯ ತಂದೆ, ಸಚಿವ ದರ್ಜೆಯ ರಾಜ್ಯ ಮಂಡಳಿಯ ಮಾಜಿ ಅಧ್ಯಕ್ಷ ವಿನೋದ್ ಆರ್ಯ ಮತ್ತು ಆತನ ಸಹೋದರ, ಬಿಜೆಪಿ ಪದಾಧಿಕಾರಿ ಅಂಕಿತ್ ಆರ್ಯ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಪುಲ್ಕಿತ್ ಆರ್ಯ ಅಲ್ಲದೆ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆಯಲಾಗಿದ್ದು, ಯುವತಿಯು ಕೊನೆಯದಾಗಿ ಮೂವರು ವ್ಯಕ್ತಿಗಳೊಂದಿಗೆ ಇರುವುದು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಶ್ಯಾವಾಟಿಕೆಗೆ ಒತ್ತಾಯ: ಯುವತಿಯ ವಾಟ್ಸಾಪ್‌ ಚಾಟ್‌ ಬಹಿರಂಗ

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳುತ್ತಿವೆ. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿವೆ.

ಯುವತಿಯು ಕಳುಹಿಸಿರುವ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹರಿದಾಡುತ್ತಿದೆ. ಅದರಲ್ಲಿ ಅವರು, ರೆಸಾರ್ಟ್‌ಗೆ ಆಗಮಿಸುತ್ತಿದ್ದ ಗ್ರಾಹಕರಿಗೆ 10 ಸಾವಿರ ರೂ.ಗೆ ‘ವಿಶೇಷ ಸೇವೆಗಳನ್ನು’ ಒದಗಿಸಲು ಹೇಗೆ ಒತ್ತಾಯಿಸಲಾಯಿತು ಎಂಬುದನ್ನು ವಿವರಿಸಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಗಳು ಈ ಸಂದೇಶಗಳು ಕೊಲೆಗೀಡಾದ ಯುವತಿಯದ್ದೆ ಎಂದು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ, ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...