Homeಮುಖಪುಟಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

- Advertisement -
- Advertisement -

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ಈ ಪಟ್ಟಣಗಳು ದುರ್ಬಲವಾದ, ಪರ್ವತ ಪ್ರದೇಶದಲ್ಲಿ ನೆಲೆಗೊಂಡಿವೆ. ಇಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಆತಂಕವನ್ನು ಸೃಷ್ಟಿಸಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಮುಳುಗಡೆ

ಬೆಟ್ಟದ ಪಟ್ಟಣವಾದ ಜೋಶಿಮಠ ಸಮುದ್ರ ಮಟ್ಟದಿಂದ ಸುಮಾರು 1,875 ಮೀಟರ್ ಎತ್ತರದಲ್ಲಿದೆ. ಪಟ್ಟಣವು ಹಲವು ವಿಧಗಳಲ್ಲಿ ಮಹತ್ವದ್ದಾಗಿದೆ: ಇದು ಟ್ರೆಕ್ಕಿಂಗ್ ಮಾರ್ಗಗಳಿಗೆ (ಹಿಮಾಲಯ ಪರ್ವತ ಶ್ರೇಣಿಯಲ್ಲಿ), ಧಾರ್ಮಿಕ ಸ್ಥಳಗಳಿಗೆ (ಉದಾಹರಣೆಗೆ ಬದರಿನಾಥ) ಹೆಸರುವಾಸಿಯಾಗಿದೆ. ಭಾರತ-ಚೀನಾ ಗಡಿ ಭಾಗಗಳ ಕಾರ್ಯತಂತ್ರಕ್ಕೂ ಮುಖ್ಯವಾಗಿದೆ.

ಈ ಎಲ್ಲ ಅಗತ್ಯಗಳನ್ನು ಪೂರೈಸಲು ಜೋಶಿಮಠದಲ್ಲಿ ಕಟ್ಟಡಗಳು ತಲೆಎತ್ತಿದವು ಎಂದು ಜಲ ನೀತಿ ತಜ್ಞ ಮತ್ತು ಸಂಶೋಧಕಿ ಕವಿತಾ ಉಪಾಧ್ಯಾಯ ಹೇಳುತ್ತಾರೆ.

ಇಲ್ಲಿನ ರಸ್ತೆಗಳು ಮತ್ತು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡುತ್ತಿರುವುದನ್ನು ಇಲ್ಲಿನ ನಿವಾಸಿಗಳು ಹೊಸ ವರ್ಷದ ಮೊದಲ ವಾದದಲ್ಲಿ ಕಂಡುಕೊಂಡರು. 200ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಹಠಾತ್ ಪ್ರವಾಹದ ನಂತರ, ಕಳೆದ ವರ್ಷದ ಫೆಬ್ರವರಿಯಿಂದ ನಿವಾಸಿಗಳು ಇಂತಹ ಬಿರುಕುಗಳನ್ನು ಗಮನಿಸುತ್ತಿದ್ದಾರೆ ಎಂದು ಉಪಾಧ್ಯಾಯ ತಿಳಿಸುತ್ತಾರೆ. ಆದರೆ ಈ ವರ್ಷದ ಜನವರಿಯ ಮೊದಲ ವಾರದಲ್ಲಿ ಇದು ಗಂಭೀರ ಸ್ವರೂಪದ್ದಾಗಿ ಕಾಣಿಸಿಕೊಂಡಿತು.

ಜೋಶಿಮಠ ಮುಳುಗುತ್ತಿದೆ, 678 ಕಟ್ಟಡಗಳು ಬಿರುಕು ಬಿಟ್ಟಿವೆ. ಇನ್ನೂ 600 ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿ ದೃಢಪಡಿಸಿದ್ದಾರೆ. ಕಟ್ಟಡಗಳು ಉರಳಲು ಆರಂಭವಾಗಿವೆ. ಎರಡು ಹೋಟೆಲ್‌ಗಳನ್ನು ನೆಲಸಮ ಮಾಡಲಾಗಿದೆ.

ಜೋಶಿಮಠ ಮುಳುಗಲು ಕಾರಣವೇನು?

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ವರದಿ ಕೃಪೆ: ದಿ ವೈರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...