Homeಮುಖಪುಟಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

- Advertisement -
- Advertisement -

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ಈ ಪಟ್ಟಣಗಳು ದುರ್ಬಲವಾದ, ಪರ್ವತ ಪ್ರದೇಶದಲ್ಲಿ ನೆಲೆಗೊಂಡಿವೆ. ಇಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಆತಂಕವನ್ನು ಸೃಷ್ಟಿಸಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಮುಳುಗಡೆ

ಬೆಟ್ಟದ ಪಟ್ಟಣವಾದ ಜೋಶಿಮಠ ಸಮುದ್ರ ಮಟ್ಟದಿಂದ ಸುಮಾರು 1,875 ಮೀಟರ್ ಎತ್ತರದಲ್ಲಿದೆ. ಪಟ್ಟಣವು ಹಲವು ವಿಧಗಳಲ್ಲಿ ಮಹತ್ವದ್ದಾಗಿದೆ: ಇದು ಟ್ರೆಕ್ಕಿಂಗ್ ಮಾರ್ಗಗಳಿಗೆ (ಹಿಮಾಲಯ ಪರ್ವತ ಶ್ರೇಣಿಯಲ್ಲಿ), ಧಾರ್ಮಿಕ ಸ್ಥಳಗಳಿಗೆ (ಉದಾಹರಣೆಗೆ ಬದರಿನಾಥ) ಹೆಸರುವಾಸಿಯಾಗಿದೆ. ಭಾರತ-ಚೀನಾ ಗಡಿ ಭಾಗಗಳ ಕಾರ್ಯತಂತ್ರಕ್ಕೂ ಮುಖ್ಯವಾಗಿದೆ.

ಈ ಎಲ್ಲ ಅಗತ್ಯಗಳನ್ನು ಪೂರೈಸಲು ಜೋಶಿಮಠದಲ್ಲಿ ಕಟ್ಟಡಗಳು ತಲೆಎತ್ತಿದವು ಎಂದು ಜಲ ನೀತಿ ತಜ್ಞ ಮತ್ತು ಸಂಶೋಧಕಿ ಕವಿತಾ ಉಪಾಧ್ಯಾಯ ಹೇಳುತ್ತಾರೆ.

ಇಲ್ಲಿನ ರಸ್ತೆಗಳು ಮತ್ತು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡುತ್ತಿರುವುದನ್ನು ಇಲ್ಲಿನ ನಿವಾಸಿಗಳು ಹೊಸ ವರ್ಷದ ಮೊದಲ ವಾದದಲ್ಲಿ ಕಂಡುಕೊಂಡರು. 200ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಹಠಾತ್ ಪ್ರವಾಹದ ನಂತರ, ಕಳೆದ ವರ್ಷದ ಫೆಬ್ರವರಿಯಿಂದ ನಿವಾಸಿಗಳು ಇಂತಹ ಬಿರುಕುಗಳನ್ನು ಗಮನಿಸುತ್ತಿದ್ದಾರೆ ಎಂದು ಉಪಾಧ್ಯಾಯ ತಿಳಿಸುತ್ತಾರೆ. ಆದರೆ ಈ ವರ್ಷದ ಜನವರಿಯ ಮೊದಲ ವಾರದಲ್ಲಿ ಇದು ಗಂಭೀರ ಸ್ವರೂಪದ್ದಾಗಿ ಕಾಣಿಸಿಕೊಂಡಿತು.

ಜೋಶಿಮಠ ಮುಳುಗುತ್ತಿದೆ, 678 ಕಟ್ಟಡಗಳು ಬಿರುಕು ಬಿಟ್ಟಿವೆ. ಇನ್ನೂ 600 ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿ ದೃಢಪಡಿಸಿದ್ದಾರೆ. ಕಟ್ಟಡಗಳು ಉರಳಲು ಆರಂಭವಾಗಿವೆ. ಎರಡು ಹೋಟೆಲ್‌ಗಳನ್ನು ನೆಲಸಮ ಮಾಡಲಾಗಿದೆ.

ಜೋಶಿಮಠ ಮುಳುಗಲು ಕಾರಣವೇನು?

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ವರದಿ ಕೃಪೆ: ದಿ ವೈರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...