Homeಮುಖಪುಟಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

- Advertisement -
- Advertisement -

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ಈ ಪಟ್ಟಣಗಳು ದುರ್ಬಲವಾದ, ಪರ್ವತ ಪ್ರದೇಶದಲ್ಲಿ ನೆಲೆಗೊಂಡಿವೆ. ಇಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಆತಂಕವನ್ನು ಸೃಷ್ಟಿಸಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಮುಳುಗಡೆ

ಬೆಟ್ಟದ ಪಟ್ಟಣವಾದ ಜೋಶಿಮಠ ಸಮುದ್ರ ಮಟ್ಟದಿಂದ ಸುಮಾರು 1,875 ಮೀಟರ್ ಎತ್ತರದಲ್ಲಿದೆ. ಪಟ್ಟಣವು ಹಲವು ವಿಧಗಳಲ್ಲಿ ಮಹತ್ವದ್ದಾಗಿದೆ: ಇದು ಟ್ರೆಕ್ಕಿಂಗ್ ಮಾರ್ಗಗಳಿಗೆ (ಹಿಮಾಲಯ ಪರ್ವತ ಶ್ರೇಣಿಯಲ್ಲಿ), ಧಾರ್ಮಿಕ ಸ್ಥಳಗಳಿಗೆ (ಉದಾಹರಣೆಗೆ ಬದರಿನಾಥ) ಹೆಸರುವಾಸಿಯಾಗಿದೆ. ಭಾರತ-ಚೀನಾ ಗಡಿ ಭಾಗಗಳ ಕಾರ್ಯತಂತ್ರಕ್ಕೂ ಮುಖ್ಯವಾಗಿದೆ.

ಈ ಎಲ್ಲ ಅಗತ್ಯಗಳನ್ನು ಪೂರೈಸಲು ಜೋಶಿಮಠದಲ್ಲಿ ಕಟ್ಟಡಗಳು ತಲೆಎತ್ತಿದವು ಎಂದು ಜಲ ನೀತಿ ತಜ್ಞ ಮತ್ತು ಸಂಶೋಧಕಿ ಕವಿತಾ ಉಪಾಧ್ಯಾಯ ಹೇಳುತ್ತಾರೆ.

ಇಲ್ಲಿನ ರಸ್ತೆಗಳು ಮತ್ತು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡುತ್ತಿರುವುದನ್ನು ಇಲ್ಲಿನ ನಿವಾಸಿಗಳು ಹೊಸ ವರ್ಷದ ಮೊದಲ ವಾದದಲ್ಲಿ ಕಂಡುಕೊಂಡರು. 200ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಹಠಾತ್ ಪ್ರವಾಹದ ನಂತರ, ಕಳೆದ ವರ್ಷದ ಫೆಬ್ರವರಿಯಿಂದ ನಿವಾಸಿಗಳು ಇಂತಹ ಬಿರುಕುಗಳನ್ನು ಗಮನಿಸುತ್ತಿದ್ದಾರೆ ಎಂದು ಉಪಾಧ್ಯಾಯ ತಿಳಿಸುತ್ತಾರೆ. ಆದರೆ ಈ ವರ್ಷದ ಜನವರಿಯ ಮೊದಲ ವಾರದಲ್ಲಿ ಇದು ಗಂಭೀರ ಸ್ವರೂಪದ್ದಾಗಿ ಕಾಣಿಸಿಕೊಂಡಿತು.

ಜೋಶಿಮಠ ಮುಳುಗುತ್ತಿದೆ, 678 ಕಟ್ಟಡಗಳು ಬಿರುಕು ಬಿಟ್ಟಿವೆ. ಇನ್ನೂ 600 ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿ ದೃಢಪಡಿಸಿದ್ದಾರೆ. ಕಟ್ಟಡಗಳು ಉರಳಲು ಆರಂಭವಾಗಿವೆ. ಎರಡು ಹೋಟೆಲ್‌ಗಳನ್ನು ನೆಲಸಮ ಮಾಡಲಾಗಿದೆ.

ಜೋಶಿಮಠ ಮುಳುಗಲು ಕಾರಣವೇನು?

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ವರದಿ ಕೃಪೆ: ದಿ ವೈರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...