Homeಮುಖಪುಟಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

- Advertisement -
- Advertisement -

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ಈ ಪಟ್ಟಣಗಳು ದುರ್ಬಲವಾದ, ಪರ್ವತ ಪ್ರದೇಶದಲ್ಲಿ ನೆಲೆಗೊಂಡಿವೆ. ಇಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಆತಂಕವನ್ನು ಸೃಷ್ಟಿಸಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಮುಳುಗಡೆ

ಬೆಟ್ಟದ ಪಟ್ಟಣವಾದ ಜೋಶಿಮಠ ಸಮುದ್ರ ಮಟ್ಟದಿಂದ ಸುಮಾರು 1,875 ಮೀಟರ್ ಎತ್ತರದಲ್ಲಿದೆ. ಪಟ್ಟಣವು ಹಲವು ವಿಧಗಳಲ್ಲಿ ಮಹತ್ವದ್ದಾಗಿದೆ: ಇದು ಟ್ರೆಕ್ಕಿಂಗ್ ಮಾರ್ಗಗಳಿಗೆ (ಹಿಮಾಲಯ ಪರ್ವತ ಶ್ರೇಣಿಯಲ್ಲಿ), ಧಾರ್ಮಿಕ ಸ್ಥಳಗಳಿಗೆ (ಉದಾಹರಣೆಗೆ ಬದರಿನಾಥ) ಹೆಸರುವಾಸಿಯಾಗಿದೆ. ಭಾರತ-ಚೀನಾ ಗಡಿ ಭಾಗಗಳ ಕಾರ್ಯತಂತ್ರಕ್ಕೂ ಮುಖ್ಯವಾಗಿದೆ.

ಈ ಎಲ್ಲ ಅಗತ್ಯಗಳನ್ನು ಪೂರೈಸಲು ಜೋಶಿಮಠದಲ್ಲಿ ಕಟ್ಟಡಗಳು ತಲೆಎತ್ತಿದವು ಎಂದು ಜಲ ನೀತಿ ತಜ್ಞ ಮತ್ತು ಸಂಶೋಧಕಿ ಕವಿತಾ ಉಪಾಧ್ಯಾಯ ಹೇಳುತ್ತಾರೆ.

ಇಲ್ಲಿನ ರಸ್ತೆಗಳು ಮತ್ತು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡುತ್ತಿರುವುದನ್ನು ಇಲ್ಲಿನ ನಿವಾಸಿಗಳು ಹೊಸ ವರ್ಷದ ಮೊದಲ ವಾದದಲ್ಲಿ ಕಂಡುಕೊಂಡರು. 200ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಹಠಾತ್ ಪ್ರವಾಹದ ನಂತರ, ಕಳೆದ ವರ್ಷದ ಫೆಬ್ರವರಿಯಿಂದ ನಿವಾಸಿಗಳು ಇಂತಹ ಬಿರುಕುಗಳನ್ನು ಗಮನಿಸುತ್ತಿದ್ದಾರೆ ಎಂದು ಉಪಾಧ್ಯಾಯ ತಿಳಿಸುತ್ತಾರೆ. ಆದರೆ ಈ ವರ್ಷದ ಜನವರಿಯ ಮೊದಲ ವಾರದಲ್ಲಿ ಇದು ಗಂಭೀರ ಸ್ವರೂಪದ್ದಾಗಿ ಕಾಣಿಸಿಕೊಂಡಿತು.

ಜೋಶಿಮಠ ಮುಳುಗುತ್ತಿದೆ, 678 ಕಟ್ಟಡಗಳು ಬಿರುಕು ಬಿಟ್ಟಿವೆ. ಇನ್ನೂ 600 ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿ ದೃಢಪಡಿಸಿದ್ದಾರೆ. ಕಟ್ಟಡಗಳು ಉರಳಲು ಆರಂಭವಾಗಿವೆ. ಎರಡು ಹೋಟೆಲ್‌ಗಳನ್ನು ನೆಲಸಮ ಮಾಡಲಾಗಿದೆ.

ಜೋಶಿಮಠ ಮುಳುಗಲು ಕಾರಣವೇನು?

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ವರದಿ ಕೃಪೆ: ದಿ ವೈರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...