Homeಮುಖಪುಟಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

- Advertisement -
- Advertisement -

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ಈ ಪಟ್ಟಣಗಳು ದುರ್ಬಲವಾದ, ಪರ್ವತ ಪ್ರದೇಶದಲ್ಲಿ ನೆಲೆಗೊಂಡಿವೆ. ಇಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಆತಂಕವನ್ನು ಸೃಷ್ಟಿಸಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಮುಳುಗಡೆ

ಬೆಟ್ಟದ ಪಟ್ಟಣವಾದ ಜೋಶಿಮಠ ಸಮುದ್ರ ಮಟ್ಟದಿಂದ ಸುಮಾರು 1,875 ಮೀಟರ್ ಎತ್ತರದಲ್ಲಿದೆ. ಪಟ್ಟಣವು ಹಲವು ವಿಧಗಳಲ್ಲಿ ಮಹತ್ವದ್ದಾಗಿದೆ: ಇದು ಟ್ರೆಕ್ಕಿಂಗ್ ಮಾರ್ಗಗಳಿಗೆ (ಹಿಮಾಲಯ ಪರ್ವತ ಶ್ರೇಣಿಯಲ್ಲಿ), ಧಾರ್ಮಿಕ ಸ್ಥಳಗಳಿಗೆ (ಉದಾಹರಣೆಗೆ ಬದರಿನಾಥ) ಹೆಸರುವಾಸಿಯಾಗಿದೆ. ಭಾರತ-ಚೀನಾ ಗಡಿ ಭಾಗಗಳ ಕಾರ್ಯತಂತ್ರಕ್ಕೂ ಮುಖ್ಯವಾಗಿದೆ.

ಈ ಎಲ್ಲ ಅಗತ್ಯಗಳನ್ನು ಪೂರೈಸಲು ಜೋಶಿಮಠದಲ್ಲಿ ಕಟ್ಟಡಗಳು ತಲೆಎತ್ತಿದವು ಎಂದು ಜಲ ನೀತಿ ತಜ್ಞ ಮತ್ತು ಸಂಶೋಧಕಿ ಕವಿತಾ ಉಪಾಧ್ಯಾಯ ಹೇಳುತ್ತಾರೆ.

ಇಲ್ಲಿನ ರಸ್ತೆಗಳು ಮತ್ತು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡುತ್ತಿರುವುದನ್ನು ಇಲ್ಲಿನ ನಿವಾಸಿಗಳು ಹೊಸ ವರ್ಷದ ಮೊದಲ ವಾದದಲ್ಲಿ ಕಂಡುಕೊಂಡರು. 200ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಹಠಾತ್ ಪ್ರವಾಹದ ನಂತರ, ಕಳೆದ ವರ್ಷದ ಫೆಬ್ರವರಿಯಿಂದ ನಿವಾಸಿಗಳು ಇಂತಹ ಬಿರುಕುಗಳನ್ನು ಗಮನಿಸುತ್ತಿದ್ದಾರೆ ಎಂದು ಉಪಾಧ್ಯಾಯ ತಿಳಿಸುತ್ತಾರೆ. ಆದರೆ ಈ ವರ್ಷದ ಜನವರಿಯ ಮೊದಲ ವಾರದಲ್ಲಿ ಇದು ಗಂಭೀರ ಸ್ವರೂಪದ್ದಾಗಿ ಕಾಣಿಸಿಕೊಂಡಿತು.

ಜೋಶಿಮಠ ಮುಳುಗುತ್ತಿದೆ, 678 ಕಟ್ಟಡಗಳು ಬಿರುಕು ಬಿಟ್ಟಿವೆ. ಇನ್ನೂ 600 ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿ ದೃಢಪಡಿಸಿದ್ದಾರೆ. ಕಟ್ಟಡಗಳು ಉರಳಲು ಆರಂಭವಾಗಿವೆ. ಎರಡು ಹೋಟೆಲ್‌ಗಳನ್ನು ನೆಲಸಮ ಮಾಡಲಾಗಿದೆ.

ಜೋಶಿಮಠ ಮುಳುಗಲು ಕಾರಣವೇನು?

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ವರದಿ ಕೃಪೆ: ದಿ ವೈರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...